ರಾಜ್ಯ

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ ಸಂಬಂಧ ಬುಧವಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಲಾಗಿದೆ.

ದ್ವೇಷ ಭಾಷಣ ಮತ್ತು ಅಪರಾಧ ಎಸಗುವವರಿಗೆ ಕನಿಷ್ಠ ೧ರಿಂದ ೧೦ ವರ್ಷಗಳವರೆಗೆ ಕಾರಾಗೃಹ ಶಿಕ್ಷೆ, ಕನಿಷ್ಠ ೫೦ ಸಾವಿರದಿಂದ ಒಂದು ಲಕ್ಷ ರೂ. ಜುಲ್ಮಾನೆ ವಿಧಿಸುವ ಕಠಿಣ ಕಾನೂನನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನೋತ್ತರದ ಬಳಿಕ ವಿಧಾನಸಭೆಯಲ್ಲಿ ೨೦೨೫ ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕವನ್ನು ಮಂಡಿಸಿದರು.

ಇದಕ್ಕೆ ವಿರೋಧ ಪಕ್ಷಗಳು ಪ್ರಬಲ ವಿರೋಧ, ಆಕ್ಷೇಪ ವ್ಯಕ್ತಪಡಿಸಿದವು. ವಿಧೇಯಕ ಮಂಡನೆ ದ್ವೇಷದ ರಾಜಕಾರಣದಿಂದ ಕೂಡಿದೆ. ಕಾಯ್ದೆ ಮಂಡನೆಗೆ ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದರು. ವಿರೋಧದ ನಡುವೆಯೂ ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕ ಮಂಡನೆಗೆ ಅವಕಾಶ ಕಲ್ಪಿಸಿದರು. ಮಂಡನೆಯಾಗಿರುವ ವಿಧೇಯಕದಲ್ಲಿ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿರ್ಬಂಧಿಸಲಾಗಿದೆ. ಸಮಾಜದಲ್ಲಿ ನಿರ್ದಿಷ್ಟ ವ್ಯಕ್ತಿ, ಸಮೂಹ, ಸಂಸ್ಥೆಗಳ ವಿರುದ್ಧ ಅಸಾಮರಸ್ಯ, ದ್ವೇಷ ಹುಟ್ಟಿಸುವಂತಹ ಅಪರಾಧಗಳನ್ನು ಪ್ರತಿಬಂಧಿಸಲು ಮತ್ತು ತಡೆಗಟ್ಟಲು ಈ ವಿಧೇಯಕವನ್ನು ರೂಪಿಸಿರುವುದಾಗಿ ತಿಳಿಸಲಾಗಿದೆ. ತಪ್ಪಿತಸ್ಥರಿಗೆ ದಂಡನೆ ವಿಧಿಸುವ ಜೊತೆಗೆ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕ ಪರಿಹಾರ ಒದಗಿಸುವುದು ವಿಧೇಯಕದಲ್ಲಿ ಅಡಕವಾಗಿದೆ.

ಯಾವುದೇ ಪೂರ್ವ ಕಲ್ಪಿತ ಹಿತಾಸಕ್ತಿಯನ್ನು ಸಾಧಿಸಲು ಬದುಕಿರುವ ವ್ಯಕ್ತಿ, ಮೃತ ವ್ಯಕ್ತಿಗಳು, ವರ್ಗ, ಗುಂಪು, ಸಮುದಾಯದ ವಿರುದ್ಧ ಹಾನಿ, ಅಸಾಮರಸ್ಯ, ವೈರತ್ವ, ದ್ವೇಷ ಹಾಗೂ ಕೆಡುಕಿನ ಭಾವನೆಗಳನ್ನು ಮೂಡಿಸುವ ಉದ್ದೇಶವನ್ನು ಅಪರಾಧ ಎಂದು ಪರಿಭಾವಿಸಲಾಗಿದೆ. ಸಾರ್ವಜನಿಕ ನೋಟದಲ್ಲಿ, ಮೌಖಿಕ ಅಥವಾ ಲಿಖಿತ ರೂಪದ ಪದಗಳಲ್ಲಿ, ಸಂಕೇತಗಳ ಮೂಲಕ, ದೃಶ್ಯರೂಪಕಗಳ ಮೂಲಕ, ವಿದ್ಯುನ್ಮಾನ ಸಂವಹನಗಳ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಕಂಡುಬರುವ ಅಪರಾಧಗಳನ್ನು ಪರಿಗಣಿಸುವುದಾಗಿ ತಿಳಿಸಲಾಗಿದೆ.

ಧರ್ಮ, ಜನಾಂಗ, ಜಾತಿ, ಸಮುದಾಯ, ಲಿಂಗತ್ವ, ಲೈಂಗಿಕ ಮನೋಗುಣ, ಜನ್ಮಸ್ಥಳ, ವಾಸಸ್ಥಳ, ಭಾಷೆ, ನ್ಯೂನತೆ ಅಥವಾ ಪಂಗಡಗಳ ಪೂರ್ವಕಲ್ಪಿತ ಹಿತಾಸಕ್ತಿಯನ್ನು ಪೂರ್ವಗ್ರಹದಿಂದ ದ್ವೇಷಿಸುವುದು ಅಥವಾ ನಿಂದಿಸುವುದನ್ನು ಅಪರಾಧ ಎಂದು ಪರಿಭಾವಿಸಲಾಗಿದೆ. ದ್ವೇಷ ಭಾಷಣವನ್ನು ಪ್ರಚುರಪಡಿಸುವ, ಮಾತನಾಡುವ ಅಥವಾ ಪ್ರಚೋದಿಸುವ ಮೂಲಕ ದುಷ್ಪರಿಣಾಮ ಉಂಟುಮಾಡುವಂತಹ ಅಪರಾಧಗಳನ್ನು ಶಿಕ್ಷಾರ್ಹ ಎಂದು ಗುರುತಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

2 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

4 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

4 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

4 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

4 hours ago

ಮಂಡ್ಯದಲ್ಲಿ ಶ್ರೀಪುರುಷ ಹೆಸರಿನಲ್ಲಿ “ಕನ್ನಡ ಭವನ”

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…

4 hours ago