ರಾಜ್ಯ

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ ಸಂಬಂಧ ಬುಧವಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಲಾಗಿದೆ.

ದ್ವೇಷ ಭಾಷಣ ಮತ್ತು ಅಪರಾಧ ಎಸಗುವವರಿಗೆ ಕನಿಷ್ಠ ೧ರಿಂದ ೧೦ ವರ್ಷಗಳವರೆಗೆ ಕಾರಾಗೃಹ ಶಿಕ್ಷೆ, ಕನಿಷ್ಠ ೫೦ ಸಾವಿರದಿಂದ ಒಂದು ಲಕ್ಷ ರೂ. ಜುಲ್ಮಾನೆ ವಿಧಿಸುವ ಕಠಿಣ ಕಾನೂನನ್ನು ಮಸೂದೆಯಲ್ಲಿ ಪ್ರಸ್ತಾಪಿಸಲಾಗಿದೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನೋತ್ತರದ ಬಳಿಕ ವಿಧಾನಸಭೆಯಲ್ಲಿ ೨೦೨೫ ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮತ್ತು ನಿಯಂತ್ರಣ ವಿಧೇಯಕವನ್ನು ಮಂಡಿಸಿದರು.

ಇದಕ್ಕೆ ವಿರೋಧ ಪಕ್ಷಗಳು ಪ್ರಬಲ ವಿರೋಧ, ಆಕ್ಷೇಪ ವ್ಯಕ್ತಪಡಿಸಿದವು. ವಿಧೇಯಕ ಮಂಡನೆ ದ್ವೇಷದ ರಾಜಕಾರಣದಿಂದ ಕೂಡಿದೆ. ಕಾಯ್ದೆ ಮಂಡನೆಗೆ ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದರು. ವಿರೋಧದ ನಡುವೆಯೂ ಸಭಾಧ್ಯಕ್ಷ ಯು.ಟಿ.ಖಾದರ್ ವಿಧೇಯಕ ಮಂಡನೆಗೆ ಅವಕಾಶ ಕಲ್ಪಿಸಿದರು. ಮಂಡನೆಯಾಗಿರುವ ವಿಧೇಯಕದಲ್ಲಿ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ನಿರ್ಬಂಧಿಸಲಾಗಿದೆ. ಸಮಾಜದಲ್ಲಿ ನಿರ್ದಿಷ್ಟ ವ್ಯಕ್ತಿ, ಸಮೂಹ, ಸಂಸ್ಥೆಗಳ ವಿರುದ್ಧ ಅಸಾಮರಸ್ಯ, ದ್ವೇಷ ಹುಟ್ಟಿಸುವಂತಹ ಅಪರಾಧಗಳನ್ನು ಪ್ರತಿಬಂಧಿಸಲು ಮತ್ತು ತಡೆಗಟ್ಟಲು ಈ ವಿಧೇಯಕವನ್ನು ರೂಪಿಸಿರುವುದಾಗಿ ತಿಳಿಸಲಾಗಿದೆ. ತಪ್ಪಿತಸ್ಥರಿಗೆ ದಂಡನೆ ವಿಧಿಸುವ ಜೊತೆಗೆ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕ ಪರಿಹಾರ ಒದಗಿಸುವುದು ವಿಧೇಯಕದಲ್ಲಿ ಅಡಕವಾಗಿದೆ.

ಯಾವುದೇ ಪೂರ್ವ ಕಲ್ಪಿತ ಹಿತಾಸಕ್ತಿಯನ್ನು ಸಾಧಿಸಲು ಬದುಕಿರುವ ವ್ಯಕ್ತಿ, ಮೃತ ವ್ಯಕ್ತಿಗಳು, ವರ್ಗ, ಗುಂಪು, ಸಮುದಾಯದ ವಿರುದ್ಧ ಹಾನಿ, ಅಸಾಮರಸ್ಯ, ವೈರತ್ವ, ದ್ವೇಷ ಹಾಗೂ ಕೆಡುಕಿನ ಭಾವನೆಗಳನ್ನು ಮೂಡಿಸುವ ಉದ್ದೇಶವನ್ನು ಅಪರಾಧ ಎಂದು ಪರಿಭಾವಿಸಲಾಗಿದೆ. ಸಾರ್ವಜನಿಕ ನೋಟದಲ್ಲಿ, ಮೌಖಿಕ ಅಥವಾ ಲಿಖಿತ ರೂಪದ ಪದಗಳಲ್ಲಿ, ಸಂಕೇತಗಳ ಮೂಲಕ, ದೃಶ್ಯರೂಪಕಗಳ ಮೂಲಕ, ವಿದ್ಯುನ್ಮಾನ ಸಂವಹನಗಳ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಕಂಡುಬರುವ ಅಪರಾಧಗಳನ್ನು ಪರಿಗಣಿಸುವುದಾಗಿ ತಿಳಿಸಲಾಗಿದೆ.

ಧರ್ಮ, ಜನಾಂಗ, ಜಾತಿ, ಸಮುದಾಯ, ಲಿಂಗತ್ವ, ಲೈಂಗಿಕ ಮನೋಗುಣ, ಜನ್ಮಸ್ಥಳ, ವಾಸಸ್ಥಳ, ಭಾಷೆ, ನ್ಯೂನತೆ ಅಥವಾ ಪಂಗಡಗಳ ಪೂರ್ವಕಲ್ಪಿತ ಹಿತಾಸಕ್ತಿಯನ್ನು ಪೂರ್ವಗ್ರಹದಿಂದ ದ್ವೇಷಿಸುವುದು ಅಥವಾ ನಿಂದಿಸುವುದನ್ನು ಅಪರಾಧ ಎಂದು ಪರಿಭಾವಿಸಲಾಗಿದೆ. ದ್ವೇಷ ಭಾಷಣವನ್ನು ಪ್ರಚುರಪಡಿಸುವ, ಮಾತನಾಡುವ ಅಥವಾ ಪ್ರಚೋದಿಸುವ ಮೂಲಕ ದುಷ್ಪರಿಣಾಮ ಉಂಟುಮಾಡುವಂತಹ ಅಪರಾಧಗಳನ್ನು ಶಿಕ್ಷಾರ್ಹ ಎಂದು ಗುರುತಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

42 mins ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

46 mins ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

51 mins ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

56 mins ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

1 hour ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

1 hour ago