ರಾಜ್ಯ

ಧರ್ಮಸ್ಥಳ ಪ್ರಕರಣ | ಮೂಳೆ ಪತ್ತೆಯ ಬಳಿಕ ತಾತ್ಕಾಲಿಕ ಶೆಡ್‌ ನಿರ್ಮಾಣ; ಉತ್ಖನನ ಮುಂದುವರಿಸಿದ ಎಸ್‌ಐಟಿ

ದಕ್ಷಿಣ ಕನ್ನಡ : ಧರ್ಮಸ್ಥಳ ಶವಗಳ ಶೋಧ ಕಾರ್ಯ ಮುಂದುವರೆದಿದ್ದು, ಇಂದು ಸಹ ದೂರುದಾರ ತೋರಿಸಿರುವ ಪಾಯಿಂಟ್‌ 6 ರಲ್ಲಿ ಮನುಷ್ಯರ ಅಸ್ತಿಪಂಜರದ ಅವಶೇಷಗಳು ಪತ್ತೆಯಾಗಿದ್ದು, ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ.

ಪಾಯಿಂಟ್‌ ನಂಬರ್‌ 6ರಲ್ಲಿ ಇನ್ನೂ ಹೆಚ್ಚಿನ ಅವಶೇಷಗಳು ಪತ್ತೆಯಾಗುತ್ತಿದ್ದು, ಶೋಧ ಕಾರ್ಯ ಮುಂದುವರಿಸಲು ಮಳೆ ಅಡ್ಡಿಯಾಗಿದೆ. ಹಾಗಾಗಿ, ಈ ಸ್ಥಳದಲ್ಲಿ ತಗಡಿನ ಶೀಟಿನ ತಾತ್ಕಲಿನ ಶೆಡ್‌ ನಿರ್ಮಿಸಲಾಗಿದೆ. ಉತ್ಖನನ ಮುಂದುವರೆದಿದೆ.

ನಾಳೆಯೂ ಪಾಯಿಂಟ್‌ ನಂಬರ್‌ 6ರಲ್ಲಿ ಶೋಧ ಮುಂದುವರಿಯುವ ಸಾಧ್ಯತೆ ಇದೆ. ಇಂದಿನ ಕಾರ್ಯಾಚರಣೆ ಸಂಜೆ ಸ್ಥಗಿತಗೊಳಿಸಲಾಗುತ್ತದಾ…. ಇಲ್ಲ ರಾತ್ರಿಯೂ ಮುಂದುವರಿಯಲಿದೆಯಾ? ಎಂಬ ಸ್ಪಷ್ಟತೆ ಸಿಕ್ಕಿಲ್ಲ.

ದೂರುದಾರ ಪಾಯಿಂಟ್‌ ನಂಬರ್‌ 6ರನ್ನು ಗುರುತಿಸಿದ್ದರು. ಸುಮಾರು 3 ಅಡಿ ಮಣ್ಣು ಅಗೆಯುವಾಗ ಮನುಷ್ಯರ ಅಸ್ತಿಪಂಜರದ ಅವಶೇಷಗಳು, ಅಂದರೆ ಮೂಳೆ, ತಲೆ ಬುರುಡೆಯ ತುಂಡು ಪತ್ತೆಯಾಗಿದೆ ಎಂದು ಹೇಳಲಾಗ್ತಿದೆ.

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

9 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

9 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

14 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago