ರಾಜ್ಯ

KSRTC –BMTC ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ೧೦ ಲಕ್ಷ –ನೌಕರರಿಗೆ ೧ ಕೋಟಿ ಪರಿಹಾರ

ಬೆಂಗಳೂರು : ಬಿಎಂಟಿಸಿ , ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್‌ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್‌ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ ಸಾರಿಗೆ ಸಚಿವರು ಕೋರ್ಟ್‌ ಕಚೇರಿಗೆ ಅಲೆದಾಡುವುದನ್ನ ತಪ್ಪಿಸಲು ಮುಂದಾಗಿದ್ದಾರೆ.

ಕೆ.ಎಸ್‌ ಆರ್‌ ಟಿಸಿ ಬಿಎಂಟಿಸಿ ಬಸ್‌ ಆಕ್ಸಿಡೆಂಟ್‌ ನಿಂದ ಸಾವನ್ನಪ್ಪಿದವರಿಗೆ ಇನ್ನು ಮುಂದೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಇತ್ತ ಕೆಎಸ್‌ ಆರ್‌ ಟಿಸಿ, ಬಿಎಂಟಿಸಿ ಡ್ರೈವರ್‌ ಕಂಡಕ್ಟರ್ ಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ.

ಈ ಹಿಂದೆ ಕೆ.ಎಸ್‌ ಆರ್‌ ಟಿಸಿ, ಬಿಎಂಟಿಸಿ ಬಸ್‌ ಆಕ್ಸಿಡೆಂಟ್‌ ನಿಂದ ಸಾವನ್ನಪ್ಪಿದ ವಾಹನ ಸವಾರರು, ಪಾದಚಾರಿಗಳಿಗೆ ಕೇವಲ ೨೫ ಸಾವಿರ ರೂಪಾಯಿ ಪರಿಹಾರ ನೀಡಲಾಗ್ತಿತ್ತು. ಇಂದಿನಿಂದ ಹತ್ತು ಲಕ್ಷ ಪರಿಹಾರ ನೀಡಲಾಗುತ್ತದೆ. ಅಲ್ಲದೆ ಕೆ.ಎಸ್‌ ಆರ್‌ ಟಿಸಿ, ಬಿಎಂಟಿಸಿ ಬಸದ ಅವಘಡ, ಬಸ್‌ ಆಕ್ಸಿಡೆಂಟ್‌ ನಿಂದ ಮೃತಪಡುವ ಪ್ರಯಾಣಿಕರಿಗೂ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಈ ಹಿಂದೆ ಕೆಎಸ್‌ ಆರ್‌ ಟಿಸಿ, ಬಿಎಂಟಿಸಿ  ಡ್ರೈವರ್‌ ,ಕಂಡಕ್ಟರ್ ಗಳು ಆಕ್ಸಿಡೆಂಟ್‌ ಆಗಿ ತೀರಿಕೊಂಡರೆ ಕೇವಲ ೩ ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಈಗ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

5 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

5 hours ago