ರಾಜ್ಯ

KSRTC –BMTC ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ೧೦ ಲಕ್ಷ –ನೌಕರರಿಗೆ ೧ ಕೋಟಿ ಪರಿಹಾರ

ಬೆಂಗಳೂರು : ಬಿಎಂಟಿಸಿ , ಕೆಎಸ್‌ ಆರ್‌ ಟಿಸಿ ಬಸ್‌ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್‌ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್‌ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ ಸಾರಿಗೆ ಸಚಿವರು ಕೋರ್ಟ್‌ ಕಚೇರಿಗೆ ಅಲೆದಾಡುವುದನ್ನ ತಪ್ಪಿಸಲು ಮುಂದಾಗಿದ್ದಾರೆ.

ಕೆ.ಎಸ್‌ ಆರ್‌ ಟಿಸಿ ಬಿಎಂಟಿಸಿ ಬಸ್‌ ಆಕ್ಸಿಡೆಂಟ್‌ ನಿಂದ ಸಾವನ್ನಪ್ಪಿದವರಿಗೆ ಇನ್ನು ಮುಂದೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಇತ್ತ ಕೆಎಸ್‌ ಆರ್‌ ಟಿಸಿ, ಬಿಎಂಟಿಸಿ ಡ್ರೈವರ್‌ ಕಂಡಕ್ಟರ್ ಗಳು ಆಕ್ಸಿಡೆಂಟ್‌ ನಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ.

ಈ ಹಿಂದೆ ಕೆ.ಎಸ್‌ ಆರ್‌ ಟಿಸಿ, ಬಿಎಂಟಿಸಿ ಬಸ್‌ ಆಕ್ಸಿಡೆಂಟ್‌ ನಿಂದ ಸಾವನ್ನಪ್ಪಿದ ವಾಹನ ಸವಾರರು, ಪಾದಚಾರಿಗಳಿಗೆ ಕೇವಲ ೨೫ ಸಾವಿರ ರೂಪಾಯಿ ಪರಿಹಾರ ನೀಡಲಾಗ್ತಿತ್ತು. ಇಂದಿನಿಂದ ಹತ್ತು ಲಕ್ಷ ಪರಿಹಾರ ನೀಡಲಾಗುತ್ತದೆ. ಅಲ್ಲದೆ ಕೆ.ಎಸ್‌ ಆರ್‌ ಟಿಸಿ, ಬಿಎಂಟಿಸಿ ಬಸದ ಅವಘಡ, ಬಸ್‌ ಆಕ್ಸಿಡೆಂಟ್‌ ನಿಂದ ಮೃತಪಡುವ ಪ್ರಯಾಣಿಕರಿಗೂ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಈ ಹಿಂದೆ ಕೆಎಸ್‌ ಆರ್‌ ಟಿಸಿ, ಬಿಎಂಟಿಸಿ  ಡ್ರೈವರ್‌ ,ಕಂಡಕ್ಟರ್ ಗಳು ಆಕ್ಸಿಡೆಂಟ್‌ ಆಗಿ ತೀರಿಕೊಂಡರೆ ಕೇವಲ ೩ ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಈಗ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

46 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

48 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

49 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

51 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

56 mins ago