ಬೆಂಗಳೂರು : ಬಿಎಂಟಿಸಿ , ಕೆಎಸ್ ಆರ್ ಟಿಸಿ ಬಸ್ ಚಾಲಕರ ಎಡವಟ್ಟಿನಿಂದ ಕೆಲವೊಮ್ಮೆ ಆಕ್ಸಿಡೆಂಟ್ ಗಳಾಗಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಿದೆ. ಅಮಾಯಕ ಜೀವಗಳು ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದರೆ ಕುಟುಂಬಸ್ಥರು ಪರಿಹಾರ ಪಡೆಯಲು ಕೋರ್ಟ್ ಕಚೇರಿ ಅಂತ ವರ್ಷಗಟ್ಟಲೇ ಅಲೆದಾಡಬೇಕಿತ್ತು. ಇದೀಗ ಸಾರಿಗೆ ಸಚಿವರು ಕೋರ್ಟ್ ಕಚೇರಿಗೆ ಅಲೆದಾಡುವುದನ್ನ ತಪ್ಪಿಸಲು ಮುಂದಾಗಿದ್ದಾರೆ.
ಕೆ.ಎಸ್ ಆರ್ ಟಿಸಿ ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದವರಿಗೆ ಇನ್ನು ಮುಂದೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಇತ್ತ ಕೆಎಸ್ ಆರ್ ಟಿಸಿ, ಬಿಎಂಟಿಸಿ ಡ್ರೈವರ್ ಕಂಡಕ್ಟರ್ ಗಳು ಆಕ್ಸಿಡೆಂಟ್ ನಲ್ಲಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೂ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ.
ಈ ಹಿಂದೆ ಕೆ.ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಆಕ್ಸಿಡೆಂಟ್ ನಿಂದ ಸಾವನ್ನಪ್ಪಿದ ವಾಹನ ಸವಾರರು, ಪಾದಚಾರಿಗಳಿಗೆ ಕೇವಲ ೨೫ ಸಾವಿರ ರೂಪಾಯಿ ಪರಿಹಾರ ನೀಡಲಾಗ್ತಿತ್ತು. ಇಂದಿನಿಂದ ಹತ್ತು ಲಕ್ಷ ಪರಿಹಾರ ನೀಡಲಾಗುತ್ತದೆ. ಅಲ್ಲದೆ ಕೆ.ಎಸ್ ಆರ್ ಟಿಸಿ, ಬಿಎಂಟಿಸಿ ಬಸದ ಅವಘಡ, ಬಸ್ ಆಕ್ಸಿಡೆಂಟ್ ನಿಂದ ಮೃತಪಡುವ ಪ್ರಯಾಣಿಕರಿಗೂ ೧೦ ಲಕ್ಷ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.
ಈ ಹಿಂದೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಡ್ರೈವರ್ ,ಕಂಡಕ್ಟರ್ ಗಳು ಆಕ್ಸಿಡೆಂಟ್ ಆಗಿ ತೀರಿಕೊಂಡರೆ ಕೇವಲ ೩ ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತಿತ್ತು. ಈಗ ಒಂದು ಕೋಟಿ ರೂಪಾಯಿ ಪರಿಹಾರ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದ್ದಾರೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…