Mysore
25
few clouds

Social Media

ಶನಿವಾರ, 30 ಮೇ 2026
Light
Dark

ಸಂಪಾಜೆ ಬಳಿ ಭೀಕರ ಅಪಘಾತ: ನುಚ್ಚು ನೂರಾದ ಕಾರು

ಮೈಸೂರು: ಮಡಿಕೇರಿಯ ಸಂಪಾಜೆ ಬಳಿ ಶನಿವಾರ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಯ ಮಂಡ್ಯ ಮೂಲದ ಛಾಯಾಚಿತ್ರಗಾರರಾಗಿದ್ದು, ಹೊನ್ನಾವರದಲ್ಲಿ ತಮ್ಮ ಕೆಲಸ ಮುಗಿಸಿ ವಾಪಸ್ ಮಂಡ್ಯಕ್ಕೆ ಹೊರಟಿದ್ದರು. ಈ ವೇಳೆ ಸಂಪಾಜೆ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದಿದೆ.

ಢಿಕ್ಕಿ ಹೊಡೆದ ರಭಸಕ್ಕೆ ಕಾರು ನುಚ್ಚು ನೂರಾಗಿದ್ದು, ಸದ್ಯ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಗಂಭೀರ ಗಾಯಾಗಳಾಗಿವೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Tags:
error: Content is protected !!