ರಾಜ್ಯ

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಬೆಂಗಳೂರು ಮೂಲದ ಮೀಸಲು ಪಡೆ ಪೊಲೀಸ್ ಅಧಿಕಾರಿಗಳು. ಅಪಘಾತದಲ್ಲಿ ಮಡಿದವರನ್ನು ಮಂಜುನಾಥ್ (೩೨), ಅಮರೇಶ್ ಹಾಗೂ ಸಚ್ಚಿನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಮಹಾಂತೇಶ್, ಈಶ್ವರ ಅವರನ್ನು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಐಮಂಗಲ ಠಾಣಾ ವ್ಯಾಪ್ತಿಯಲ್ಲಿ ಬೆಳಗಿನ ಜಾವ ಈ ಘಟನೆ ನಡೆದಿದೆ. ಭೀಕರ ಅಪಘಾತದಲ್ಲಿ ಮೂರು ಜನ ಅಧಿಕಾರಿಗಳು ಮೃತಪಟ್ಟಿದ್ದು, ಮಹಾಂತೇಶ್ ಹಾಗೂ ಈಶ್ವರ್ ಎಂಬುವರು ಗಾಯಗೊಂಡಿದ್ದಾರೆ. ಬೆಂಗಳೂರಿಂದ ಬಳ್ಳಾರಿಗೆ ಮದುವೆಗೆ ಹೋಗುವಾಗ ಘಟನೆ ನಡೆದಿದ್ದು, ಐದು ಜನ ಪೊಲೀಸರು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಘಟನೆ ಸಂಬಂಧ ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಎಸ್ಪಿ ರಂಜಿತಕುಮಾರ ಬಂಡಾರು ಮಾಹಿತಿ ನೀಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ
ಹೆಗ್ಗೆರೆ ಗೇಟ್ ಬಳಿ ಭೀಕರ ಅಪಘಾತ ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿ, ಭೀಕರ ಅಪಘಾತದ ಮಾಹಿತಿ ಪಡೆದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಘಟನೆಯಲ್ಲಿ ಮೂರು ಮಂದಿ ಪ್ರೊಬೇಷನರಿ ಅಧಿಕಾರಿಗಳು ಸಾವನ್ನಪ್ಪಿದ್ದಾರೆ.

ಸ್ನೇಹಿತನ ಮದುವೆಗೆ ಬಳ್ಳಾರಿಗೆ ತೆರಳುವಾಗ ಅಪಘಾತವಾಗಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಕಾರು ತುಂಬಾ ವೇಗದಲ್ಲಿ ಚಲಿಸುತ್ತಿತ್ತು ಎನ್ನಲಾಗಿದೆ. ಇದರಲ್ಲಿ ಯಾರದ್ದು ತಪ್ಪು ಅಂತ ಹೇಳೋದು ಕಷ್ಟ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ.

ಸರ್ಕಾರ ಏನೆಲ್ಲಾ ನೆರವು ನೀಡಬೇಕು ಎಲ್ಲವನ್ನು ನೀಡುತ್ತದೆ. ರಜೆ ಮೇಲೆ ಮದುವೆಗೆ ತೆರಳುತ್ತಿದ್ದರು ಎಂಬ ಮಾಹಿತಿ ಇದೆ. ಇದರಿಂದ ಯಾವ ಸಹಾಯ ಮಾಡ್ಬೇಕು ಸರ್ಕಾರ ಮಾಡುತ್ತದೆ. ಆನ್ ಡ್ಯೂಟಿ ಇಲ್ಲದ ಕಾರಣ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಇವರೆಲ್ಲರೂ ಈಗಷ್ಠೆ ಟ್ರೈನಿಂಗ್ ಮುಗಿಸಿ ಡ್ಯೂಟಿಗೆ ಜಾಯಿನ್ ಆದವರು. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಏನ್ ಸಾಧ್ಯವಾಗುತ್ತೋ ಅದನ್ನ ಸಹಾಯ ಮಾಡುತ್ತೇವೆ ಎಂದು ತಿಳಿಸಿದರು.

ಆಸ್ಪತ್ರೆಗೆ ಭೇಟಿ;
ಚಳ್ಳಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭೇಟಿ ನೀಡಿ ಮಂಜುನಾಥ್, ಅಮರೀಶ್, ಸಚ್ಚಿನ್ ಮೃತ ದೇಹ ವೀಕ್ಷಣೆ ಮಾಡಿದರು. ಈ ವೇಳೆ ಗೃಹ ಸಚಿವರ ಮುಂದೆ ಮೃತನ ಕುಟುಂಬಸ್ಥರು ಬಿಕ್ಕಿ ಬಿಕ್ಕಿ ಕಣ್ಣಿರಿಟ್ಟರು. ಸಚಿವರು ಕುಟುಂಬಸ್ಥರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘಮೂರ್ತಿ ಇದ್ದರು.‌

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

2 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

2 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

2 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

2 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

2 hours ago