ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಪೊಲೀಸರು ಉಗ್ರರ ದಾಳಿ ಎಂದು ಶಂಕಿಸಲಾಗಿದೆ.
ಭಾರತದಲ್ಲಿಯೂ ಯಹೂದಿಗಳ ಕಚೇರಿ ಇರುವ ಹಿನ್ನೆಲೆ, ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಬೆಂಗಳೂರು ಸೇರಿದಂತೆ ಪ್ರಮುಖ ಮೆಟ್ರೋ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸಂಜೆ 6.30ರ ಸುಮಾರಿಗೆ ಬಂದೂಕುಧಾರಿ ದುಷ್ಕರ್ಮಿಗಳು ಬಾಂಡಿ ಬೀಚ್ನಲ್ಲಿದ್ದ ಜನರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಯಹೂದಿಗಳು ಒಂದು ವಾರ ಆಚರಿಸುವ ಹನುಕ್ಕಾ ಹಬ್ಬದ ಮೊದಲ ದಿನವೇ ಈ ದುರ್ಘಟನೆ ನಡೆದಿದೆ.
ಇದನ್ನು ಓದಿ : ಭಯೋತ್ಪಾದನೆ ನಾಶಪಡಿಸಲು ದಿಟ್ಟ ಕ್ರಮ ಅನಿವಾರ್ಯ
ಭಾರತದಲ್ಲೂ ಯಹೂದಿಗಳ ಹಬ್ಬವಾದ ಹನುಕ್ಕಾ ಆಚರಿಸುವ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ದೇಶದಾದ್ಯಂತ ಎಚ್ಚರಿಕೆ ನೀಡಲಾಗಿದೆ. ಭಯೋತ್ಪಾದಕ ಸಂಘಟನೆಗಳು ದೆಹಲಿ, ಬೆಂಗಳೂರು ಮತ್ತು ಮುಂಬೈನಲ್ಲಿರುವ ಯಹೂದಿ ಸಂಸ್ಥೆಗಳು ಮತ್ತು ಕೇಂದ್ರಗಳ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸಲು ಯೋಜಿಸಿವೆ ಎಂಬ ಗಂಭೀರ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಈ ಹಿನ್ನೆಲೆ, ಏರ್ಪೋರ್ಟ್ಗಳಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ. ಹನುಕ್ಕಾ ಹಬ್ಬ ಆರಂಭದ ದಿನ ಹಿನ್ನೆಲೆಸಿಡ್ನಿ ಬೀಚ್ನಲ್ಲಿದ್ದ ಸಾವಿರಾರು ಜನರು ಸೇರಿದ್ದರು. ಈ ವೇಳೆ ಸ್ಥಳಕ್ಕೆ ನುಗ್ಗಿದ್ದ ಬಂದೂಕುಧಾರಿ ಮನಬಂದಂತೆ ಗುಂಡು ಹಾರಿಸಲು ಶುರು ಮಾಡಿದ್ದ. ಸದ್ಯ ಒಬನನ್ನು ಹೊಡೆದುರುಳಿಸಲಾಗಿದ್ದು, ಇನ್ನೋರ್ವನನ್ನು ಬಂಧಿಸಲಾಗಿದೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…