ರಾಜ್ಯ

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯನ್ನು ಪೊಲೀಸರು ಉಗ್ರರ ದಾಳಿ ಎಂದು ಶಂಕಿಸಲಾಗಿದೆ.

ಭಾರತದಲ್ಲಿಯೂ ಯಹೂದಿಗಳ ಕಚೇರಿ ಇರುವ ಹಿನ್ನೆಲೆ, ಯಾವುದೇ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಬೆಂಗಳೂರು ಸೇರಿದಂತೆ ಪ್ರಮುಖ ಮೆಟ್ರೋ ನಗರಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಸಂಜೆ 6.30ರ ಸುಮಾರಿಗೆ ಬಂದೂಕುಧಾರಿ ದುಷ್ಕರ್ಮಿಗಳು ಬಾಂಡಿ ಬೀಚ್‌ನಲ್ಲಿದ್ದ ಜನರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಯಹೂದಿಗಳು ಒಂದು ವಾರ ಆಚರಿಸುವ ಹನುಕ್ಕಾ ಹಬ್ಬದ ಮೊದಲ ದಿನವೇ ಈ ದುರ್ಘಟನೆ ನಡೆದಿದೆ.

ಇದನ್ನು ಓದಿ : ಭಯೋತ್ಪಾದನೆ ನಾಶಪಡಿಸಲು ದಿಟ್ಟ ಕ್ರಮ ಅನಿವಾರ್ಯ

ಭಾರತದಲ್ಲೂ ಯಹೂದಿಗಳ ಹಬ್ಬವಾದ ಹನುಕ್ಕಾ ಆಚರಿಸುವ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ದೇಶದಾದ್ಯಂತ ಎಚ್ಚರಿಕೆ ನೀಡಲಾಗಿದೆ. ಭಯೋತ್ಪಾದಕ ಸಂಘಟನೆಗಳು ದೆಹಲಿ, ಬೆಂಗಳೂರು ಮತ್ತು ಮುಂಬೈನಲ್ಲಿರುವ ಯಹೂದಿ ಸಂಸ್ಥೆಗಳು ಮತ್ತು ಕೇಂದ್ರಗಳ ಮೇಲೆ ದೊಡ್ಡ ಮಟ್ಟದ ದಾಳಿ ನಡೆಸಲು ಯೋಜಿಸಿವೆ ಎಂಬ ಗಂಭೀರ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಈ ಹಿನ್ನೆಲೆ, ಏರ್ಪೋರ್ಟ್‌ಗಳಲ್ಲಿ ಭಾರಿ ಭದ್ರತೆ ನಿಯೋಜಿಸಲಾಗಿದೆ. ಹನುಕ್ಕಾ ಹಬ್ಬ ಆರಂಭದ ದಿನ ಹಿನ್ನೆಲೆಸಿಡ್ನಿ ಬೀಚ್‌ನಲ್ಲಿದ್ದ ಸಾವಿರಾರು ಜನರು ಸೇರಿದ್ದರು. ಈ ವೇಳೆ ಸ್ಥಳಕ್ಕೆ ನುಗ್ಗಿದ್ದ ಬಂದೂಕುಧಾರಿ ಮನಬಂದಂತೆ ಗುಂಡು ಹಾರಿಸಲು ಶುರು ಮಾಡಿದ್ದ. ಸದ್ಯ ಒಬನನ್ನು ಹೊಡೆದುರುಳಿಸಲಾಗಿದ್ದು, ಇನ್ನೋರ್ವನನ್ನು ಬಂಧಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 mins ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

17 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

22 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

27 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

31 mins ago