ರಾಜ್ಯ

ಕಾವೇರಿ ವಿವಾದ ; ನಾಳೆ ಸರ್ವಪಕ್ಷಗಳ ಸಭೆ ಕರೆದ ತಮಿಳುನಾಡು

ಬೆಂಗಳೂರು : ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡಲು ಕರ್ನಾಟಕ ಒಪ್ಪದ ಹಿನ್ನೆಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.

ಕಾವೇರಿ  ನೀರು ನಿರ್ವಹಣಾ ಪ್ರಾಧಿಕಾರ ಜುಲೈ ೧೨ ರಿಂದ ೩೧ ರವರೆಗೆ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡುವಂತೆ ಸೂಚನೆ ನೀಡಿತ್ತು. ಆದ್ರೆ ನಮ್ಮ ಕರ್ನಾಟಕ ಸರ್ಕಾರ ಇದನ್ನ ತಿರಸ್ಕರಿಸಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಸಿ ಪ್ರತಿ ದಿನ ೧ ಟಿಎಂಸಿ ನೀರು ಬಿಡೋದಿಕ್ಕೆ ಆಗಲ್ಲ ಎಂದು CWRC ಶಿಫಾರಸ್ಸು ಒಪ್ಪಲು ಸಾಧ್ಯವಿಲ್ಲ ಎಂದಿತು.

ಕರ್ನಾಟಕದ ನಿರ್ಧಾರದ ಬೆನ್ನಲ್ಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್‌ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.

ಜುಲೈ ೧೧ ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ೩ನೇ ಸಭೆ ನಡೆಸಿ ಜುಲೈ ೧೨ ರಂದು ಈ ತಿಂಗಳ ಕೊನೆಯವರೆಗೂ ಸುಮಾರು ೨೦ ದಿನ ಪ್ರತಿ ದಿನ ೧ ಟಿಎಂಸಿ ನೀರು ಬಿಡಲು ಆದೇಶಿಸಿತ್ತು. ನಾರ್ಮಲ್‌ ವರ್ಷದಲ್ಲಿ ಜೂನ್‌ ತಿಂಗಳಲ್ಲಿ ೯.೪ ಟಿಎಂಸಿ , ಜುಲೈ ನಲ್ಲಿ ೩೧.೨೪ ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು ೪೦.೪೩ ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ ೫ ಟಿಎಂಸಿ ಗೂ ನೀರು ಬಿಡಲು ಸಾಧ್ಯವಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

24 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

34 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

41 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

51 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago