ಬೆಂಗಳೂರು : ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡಲು ಕರ್ನಾಟಕ ಒಪ್ಪದ ಹಿನ್ನೆಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಜುಲೈ ೧೨ ರಿಂದ ೩೧ ರವರೆಗೆ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡುವಂತೆ ಸೂಚನೆ ನೀಡಿತ್ತು. ಆದ್ರೆ ನಮ್ಮ ಕರ್ನಾಟಕ ಸರ್ಕಾರ ಇದನ್ನ ತಿರಸ್ಕರಿಸಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಸಿ ಪ್ರತಿ ದಿನ ೧ ಟಿಎಂಸಿ ನೀರು ಬಿಡೋದಿಕ್ಕೆ ಆಗಲ್ಲ ಎಂದು CWRC ಶಿಫಾರಸ್ಸು ಒಪ್ಪಲು ಸಾಧ್ಯವಿಲ್ಲ ಎಂದಿತು.
ಕರ್ನಾಟಕದ ನಿರ್ಧಾರದ ಬೆನ್ನಲ್ಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಜುಲೈ ೧೧ ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ೩ನೇ ಸಭೆ ನಡೆಸಿ ಜುಲೈ ೧೨ ರಂದು ಈ ತಿಂಗಳ ಕೊನೆಯವರೆಗೂ ಸುಮಾರು ೨೦ ದಿನ ಪ್ರತಿ ದಿನ ೧ ಟಿಎಂಸಿ ನೀರು ಬಿಡಲು ಆದೇಶಿಸಿತ್ತು. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ ೯.೪ ಟಿಎಂಸಿ , ಜುಲೈ ನಲ್ಲಿ ೩೧.೨೪ ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು ೪೦.೪೩ ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ ೫ ಟಿಎಂಸಿ ಗೂ ನೀರು ಬಿಡಲು ಸಾಧ್ಯವಾಗಿದೆ.
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…
ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…
ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ ಚಾಮರಾಜನಗರ: ಇಲ್ಲಿನ…
ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…