ಬೆಂಗಳೂರು : ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡಲು ಕರ್ನಾಟಕ ಒಪ್ಪದ ಹಿನ್ನೆಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಜುಲೈ ೧೨ ರಿಂದ ೩೧ ರವರೆಗೆ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಬಿಡುವಂತೆ ಸೂಚನೆ ನೀಡಿತ್ತು. ಆದ್ರೆ ನಮ್ಮ ಕರ್ನಾಟಕ ಸರ್ಕಾರ ಇದನ್ನ ತಿರಸ್ಕರಿಸಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಸಿ ಪ್ರತಿ ದಿನ ೧ ಟಿಎಂಸಿ ನೀರು ಬಿಡೋದಿಕ್ಕೆ ಆಗಲ್ಲ ಎಂದು CWRC ಶಿಫಾರಸ್ಸು ಒಪ್ಪಲು ಸಾಧ್ಯವಿಲ್ಲ ಎಂದಿತು.
ಕರ್ನಾಟಕದ ನಿರ್ಧಾರದ ಬೆನ್ನಲ್ಲೆ ನಾಳೆ ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈಮುರುಗನ್ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಜುಲೈ ೧೧ ರಂದು ಕಾವೇರಿ ನೀರು ನಿಯಂತ್ರಣ ಸಮಿತಿ ೩ನೇ ಸಭೆ ನಡೆಸಿ ಜುಲೈ ೧೨ ರಂದು ಈ ತಿಂಗಳ ಕೊನೆಯವರೆಗೂ ಸುಮಾರು ೨೦ ದಿನ ಪ್ರತಿ ದಿನ ೧ ಟಿಎಂಸಿ ನೀರು ಬಿಡಲು ಆದೇಶಿಸಿತ್ತು. ನಾರ್ಮಲ್ ವರ್ಷದಲ್ಲಿ ಜೂನ್ ತಿಂಗಳಲ್ಲಿ ೯.೪ ಟಿಎಂಸಿ , ಜುಲೈ ನಲ್ಲಿ ೩೧.೨೪ ಟಿಎಂಸಿ ನೀರು ಬಿಡಬೇಕಾಗಿದೆ. ಅಂದರೆ ಒಟ್ಟು ೪೦.೪೩ ಟಿಎಂಸಿ ಬಿಡಬೇಕಾಗಿದೆ. ಇಲ್ಲಿಯವರೆಗೂ ೫ ಟಿಎಂಸಿ ಗೂ ನೀರು ಬಿಡಲು ಸಾಧ್ಯವಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…