ರಾಜ್ಯ

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಬಾಬು ಅವರು ಸೋಮವಾರ ಹೇಳಿದ್ದಿಷ್ಟು:

“ಮೇಕೆದಾಟು ಯೋಜನೆ ಜಾರಿಗೆ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾಂಗ್ರೆಸ್ ಪಕ್ಷ ದೊಡ್ಡ ಹೋರಾಟ ಮಾಡಿತ್ತು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲಾಗಿದೆ.

ಈ ಮಧ್ಯೆ ಹಿರಿಯರಾದ ದೇವೇಗೌಡರು ಈ ಯೋಜನೆ ಪರವಾಗಿ ಮಾತನಾಡಿದ್ದಾರೆ. ಪಕ್ಷಾತೀತವಾಗಿ ಈ ಯೋಜನೆ ಪರವಾಗಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.

ಅವರ ಈ ಬೆಂಬಲಕ್ಕೆ ಧನ್ಯವಾದಗಳು, ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ.

ಕುಮಾರಸ್ವಾಮಿ ಅವರು ಸಹ ಶೀಘ್ರ ಗುಣಮುಖರಾಗಲಿ. ಸುಮಲತಾ ಅವರನ್ನು ಅಕ್ಕ ಎಂದು ಕುಮಾರಸ್ವಾಮಿ ಕರೆದಿದ್ದಾರೆ.

ಅವರ ಪರವಾಗಿ ಮಾತನಾಡುತ್ತಿದ್ದಾರೆ. ಸುಮಲತಾ ಅವರನ್ನು ಎಂಎಲ್ ಸಿ ಮಾಡಿ ಎಂದು ಬಿಜೆಪಿಗೆ ಸಲಹೆ ನೀಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಾಗ 7 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದರು.

ನಾವು ಯಾವುದೇ ಪಕ್ಷಗಳ ಮನೆ ಬಾಗಿಲಿಗೆ ಹೋಗಬಾರದು ಅವರೇ ನಮ್ಮ ಬಳಿ ಬರಬೇಕು ಎಂದು ದೇವೇಗೌಡರು ಪದೇ, ಪದೇ ಹೇಳುತ್ತಿದ್ದರು.

ಈಗ ಪ್ರತಿದಿನ ಯಡಿಯೂರಪ್ಪ ಅವರ ಮನೆ ಬಾಗಿಲು ತಟ್ಟುವ ಪರಿಸ್ಥಿತಿ ಉಂಟಾಗಿದೆ.

ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಹಿಂದೆ ಲೋಕಶಕ್ತಿ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು 3 ಸ್ಥಾನಗಳನ್ನು ಗೆದ್ದರು.

ಕರ್ನಾಟಕದಲ್ಲಿ ಈ ಪಕ್ಷ ಇತ್ತು ಎಂಬುದೇ ಜನಕ್ಕೆ ಮರೆತು ಹೋಗಿದೆ. ಇದೇ ಪರಿಸ್ಥಿತಿ ಜೆಡಿಎಸ್ ಪಕ್ಷಕ್ಕೆ ಖಂಡಿತಾ ಬರಲಿದೆ. ಜೆಡಿಎಸ್ ಕರ್ನಾಟಕದಿಂದ ಕಣ್ಮರೆ ಆಗುತ್ತದೆ.

ಕೇವಲ ಮೂರು ಸ್ಥಾನಕ್ಕೆ ಅಂಗಲಾಚುತ್ತಿದೆ. ಸಿ.ಎಸ್.ಪುಟ್ಟರಾಜು ಅವರನ್ನೇ ಅಭ್ಯರ್ಥಿ ಎಂದು ಹೇಳಿ ಈಗ ನಾನೇ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಿದ್ದಾರೆ ಕುಮಾರಸ್ವಾಮಿ.

ಅಂದರೆ ಇವರಿಗೆ ಕುಟುಂಬ ಮಾತ್ರ ಮುಖ್ಯ. 2013ರ ಲೋಕಸಭಾ ಉಪಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ಬಿಜೆಪಿ ಬೆಂಬಲದಿಂದ ಜೆಡಿಎಸ್ ಸ್ಪರ್ಧೆ ಮಾಡಿತ್ತು.

ಆದರೆ ಗೆದಿದ್ದು ಮಾತ್ರ ಕಾಂಗ್ರೆಸ್ ಪಕ್ಷ. ಕನಿಷ್ಠ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಜೆಡಿಎಸ್ ಪಕ್ಷದ ಆತ್ಮ ವಂಚನೆಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

28 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

33 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

42 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago