ರಾಜ್ಯ

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ಅವರಿಗೆ ಧನ್ಯವಾದಗಳು. ಈ ಯೋಜನೆಗೆ ವಿರೋಧ ಮಾಡುತ್ತಿರುವ ಬಿಜೆಪಿಯ ಆರ್. ಅಶೋಕ್ ಹಾಗೂ ಇತರ ನಾಯಕರು ದೇವೇಗೌಡರಿಂದ ಸಲಹೆ ಪಡೆಯಲಿ” ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಬಾಬು ಅವರು ಸೋಮವಾರ ಹೇಳಿದ್ದಿಷ್ಟು:

“ಮೇಕೆದಾಟು ಯೋಜನೆ ಜಾರಿಗೆ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾಂಗ್ರೆಸ್ ಪಕ್ಷ ದೊಡ್ಡ ಹೋರಾಟ ಮಾಡಿತ್ತು. ಈ ಯೋಜನೆಗೆ ಅನುಮೋದನೆ ನೀಡಬೇಕು ಎಂದು ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾವನೆ ಇಡಲಾಗಿದೆ.

ಈ ಮಧ್ಯೆ ಹಿರಿಯರಾದ ದೇವೇಗೌಡರು ಈ ಯೋಜನೆ ಪರವಾಗಿ ಮಾತನಾಡಿದ್ದಾರೆ. ಪಕ್ಷಾತೀತವಾಗಿ ಈ ಯೋಜನೆ ಪರವಾಗಿ ಹೋರಾಟ ಮಾಡಬೇಕು ಎಂದು ಹೇಳಿದ್ದಾರೆ.

ಅವರ ಈ ಬೆಂಬಲಕ್ಕೆ ಧನ್ಯವಾದಗಳು, ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷದ ಪರವಾಗಿ ಸ್ವಾಗತಿಸುತ್ತೇನೆ.

ಕುಮಾರಸ್ವಾಮಿ ಅವರು ಸಹ ಶೀಘ್ರ ಗುಣಮುಖರಾಗಲಿ. ಸುಮಲತಾ ಅವರನ್ನು ಅಕ್ಕ ಎಂದು ಕುಮಾರಸ್ವಾಮಿ ಕರೆದಿದ್ದಾರೆ.

ಅವರ ಪರವಾಗಿ ಮಾತನಾಡುತ್ತಿದ್ದಾರೆ. ಸುಮಲತಾ ಅವರನ್ನು ಎಂಎಲ್ ಸಿ ಮಾಡಿ ಎಂದು ಬಿಜೆಪಿಗೆ ಸಲಹೆ ನೀಡಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಾಗ 7 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದ್ದರು.

ನಾವು ಯಾವುದೇ ಪಕ್ಷಗಳ ಮನೆ ಬಾಗಿಲಿಗೆ ಹೋಗಬಾರದು ಅವರೇ ನಮ್ಮ ಬಳಿ ಬರಬೇಕು ಎಂದು ದೇವೇಗೌಡರು ಪದೇ, ಪದೇ ಹೇಳುತ್ತಿದ್ದರು.

ಈಗ ಪ್ರತಿದಿನ ಯಡಿಯೂರಪ್ಪ ಅವರ ಮನೆ ಬಾಗಿಲು ತಟ್ಟುವ ಪರಿಸ್ಥಿತಿ ಉಂಟಾಗಿದೆ.

ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಹಿಂದೆ ಲೋಕಶಕ್ತಿ ಪಕ್ಷ ಸ್ಥಾಪಿಸಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು 3 ಸ್ಥಾನಗಳನ್ನು ಗೆದ್ದರು.

ಕರ್ನಾಟಕದಲ್ಲಿ ಈ ಪಕ್ಷ ಇತ್ತು ಎಂಬುದೇ ಜನಕ್ಕೆ ಮರೆತು ಹೋಗಿದೆ. ಇದೇ ಪರಿಸ್ಥಿತಿ ಜೆಡಿಎಸ್ ಪಕ್ಷಕ್ಕೆ ಖಂಡಿತಾ ಬರಲಿದೆ. ಜೆಡಿಎಸ್ ಕರ್ನಾಟಕದಿಂದ ಕಣ್ಮರೆ ಆಗುತ್ತದೆ.

ಕೇವಲ ಮೂರು ಸ್ಥಾನಕ್ಕೆ ಅಂಗಲಾಚುತ್ತಿದೆ. ಸಿ.ಎಸ್.ಪುಟ್ಟರಾಜು ಅವರನ್ನೇ ಅಭ್ಯರ್ಥಿ ಎಂದು ಹೇಳಿ ಈಗ ನಾನೇ ಸ್ಪರ್ಧೆ ಮಾಡುತ್ತೇನೆ ಎನ್ನುತ್ತಿದ್ದಾರೆ ಕುಮಾರಸ್ವಾಮಿ.

ಅಂದರೆ ಇವರಿಗೆ ಕುಟುಂಬ ಮಾತ್ರ ಮುಖ್ಯ. 2013ರ ಲೋಕಸಭಾ ಉಪಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ಬಿಜೆಪಿ ಬೆಂಬಲದಿಂದ ಜೆಡಿಎಸ್ ಸ್ಪರ್ಧೆ ಮಾಡಿತ್ತು.

ಆದರೆ ಗೆದಿದ್ದು ಮಾತ್ರ ಕಾಂಗ್ರೆಸ್ ಪಕ್ಷ. ಕನಿಷ್ಠ 20 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಜೆಡಿಎಸ್ ಪಕ್ಷದ ಆತ್ಮ ವಂಚನೆಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

 

 

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

35 mins ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

1 hour ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

2 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

8 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

9 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

9 hours ago