ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ ಮಾತನಾಡಿದ ಅವರು, ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದು, ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಪ್ರತಿಕ್ರಿಯೆ ಕೊಡಲು ಆಗಲ್ಲ. ನಿರಂತರ ೧೫ ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದ್ರೂ ಮಾಡಿದ್ದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಅಲ್ಲದೆ ಪ್ರಾಧಿಕಾರದ ಸದಸ್ಯರಾಗಲು ಪರಿಷತ್, ವಿಧಾನಸಭೆ ಸದಸ್ಯತ್ವ ಇರಬೇಕು. ಇದನ್ನ ಸರ್ಕಾರ ಸರಿಪಡಿಸುವ ಕೆಲಸ ಮಾಡಬೇಕು. ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಮುಖಂಡೆ ಹೆಸರು ಕೇಳಿ ಬರುತ್ತಿದೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಜಿಟಿ ದೇವೇಗೌಡ, ಸಾರಾ ಮಹೇಶ್, ಎಸ್ ಟಿ ಸೋಮಶೇಕರ್ ಹೆಸರು ಕೇಳಿ ಬರುತ್ತಿದೆ. ಎಲ್ಲರ ಹೆಸರು ಕೇಳಿ ಬರುತ್ತಿರುವುದರಿಂದ ಯಾರು ಇದ್ದಾರೆ ಯಾರು ಇಲ್ಲ ಎಂಬುವುದನ್ನ ನಾನು ಹೇಳಲು ಸಾಧ್ಯವಿಲ್ಲ ಎಂದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…