ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್ ಸೇಠ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ ಮಾತನಾಡಿದ ಅವರು, ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದು, ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಪ್ರತಿಕ್ರಿಯೆ ಕೊಡಲು ಆಗಲ್ಲ. ನಿರಂತರ ೧೫ ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದ್ರೂ ಮಾಡಿದ್ದರೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಅಲ್ಲದೆ ಪ್ರಾಧಿಕಾರದ ಸದಸ್ಯರಾಗಲು ಪರಿಷತ್, ವಿಧಾನಸಭೆ ಸದಸ್ಯತ್ವ ಇರಬೇಕು. ಇದನ್ನ ಸರ್ಕಾರ ಸರಿಪಡಿಸುವ ಕೆಲಸ ಮಾಡಬೇಕು. ಬಿಜೆಪಿ, ಜೆಡಿಎಸ್ ಕಾಂಗ್ರೆಸ್ ಮುಖಂಡೆ ಹೆಸರು ಕೇಳಿ ಬರುತ್ತಿದೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಜಿಟಿ ದೇವೇಗೌಡ, ಸಾರಾ ಮಹೇಶ್, ಎಸ್ ಟಿ ಸೋಮಶೇಕರ್ ಹೆಸರು ಕೇಳಿ ಬರುತ್ತಿದೆ. ಎಲ್ಲರ ಹೆಸರು ಕೇಳಿ ಬರುತ್ತಿರುವುದರಿಂದ ಯಾರು ಇದ್ದಾರೆ ಯಾರು ಇಲ್ಲ ಎಂಬುವುದನ್ನ ನಾನು ಹೇಳಲು ಸಾಧ್ಯವಿಲ್ಲ ಎಂದರು.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…