ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ನನ್ನ ನೋಡಲು ಇಂದು ಕಾಟೇರ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಹಾಗೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೇಟಿ ನೀಡಿದ್ದರು.
ದರ್ಶನ್ ಜೈಲು ಸೇರಿದ ಬಳಿಕ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್ ರನ್ನ ತರುಣ್ ಸುಧೀರ್ ಭೇಟಿ ಮಾಡಿ, ತಮ್ಮ ಮದುವೆಯ ಆಮಂತ್ರಣವನ್ನು ದರ್ಶನ್ ಗೆ ನೀಡಿದ್ದಾರೆ ಎನ್ನಲಾಗಿದೆ.
ಆಗಸ್ಟ್ ೧೦ ಮತ್ತು ೧೧ ರಂದು ನಟಿ ಸೋನಲ್ ಮೊಂತೇರೋ ಜೊತೆಗೆ ತರುಣ್ ವಿವಾಹವಾಗುತ್ತಿದ್ದಾರೆ. ದರ್ಶನ್ ಜೈಲಿನಲ್ಲಿರುವ ಕಾರಣ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್ ಯೋಚಿಸಿದ್ದರು. ಆದರೆ ಹಿರಿಯರು ಹಾಗೂ ದರ್ಶನ್ ಸಲಹೆ ಮೇರೆಗೆ ಮದುವೆಗೆ ಮುಂದಾಗಿದ್ದಾರೆ. ಹೀಗಾಗಿ ದರ್ಶನ್ ರನ್ನ ಭೇಟಿ ಮಾಡಿ ಅವರ ಕ್ಷೇಮ ವಿಚಾರಿಸಿ ಮದುವೆ ವಿಚಾರ ತಿಳಿಸಿದ್ದಾರೆ.
ಇತ್ತ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ನಟ ದರ್ಶನ್ ನನ್ನು ಭೇಟಿ ಮಾಡಿ ಮಾತನಾಡಿಸಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…