ರಾಜ್ಯ

ಆ ಹುಡುಗ ಎಳಸು, ಆತ ವೇಸ್ಟ್‌ ಮೆಟೀರಿಯಲ್‌ : ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಬೆಂಗಳೂರು : ಆ ಹುಡುಗ ಇನ್ನು ಎಳಸು. ಆತನಿಗೆ ಇನ್ನು ಅನುಭವವಿಲ್ಲ. ಅವನೊಬ್ಬ ವೇಸ್ಟ್ ಮೆಟೀರಿಯಲ್. ಗೌರವ ಕೊಟ್ಟು ಕರೆದು ಮಾತಾಡಿದರೆ ಬಾಯಿಗೆ ಬಂದಂತೆ ವದರುತ್ತಿದ್ದಾನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಟನಲ್ ರಸ್ತೆ ಬೇಡ ಹೇಳುವುದಕ್ಕೆ ಈ ತೇಜಸ್ವಿ ಸೂರ್ಯ ಯಾರು? ಈ ದೇಶದಲ್ಲಿ, ಪ್ರಪಂಚದಲ್ಲಿಯೇ ಟನಲ್ ರಸ್ತೆಗಳೇ ಬೇಡ ಎಂದು ಅವನು ಕೇಂದ್ರ ಸಚಿವನಾದ ಮೇಲೆ ಲೋಕಸಭೆಯಲ್ಲಿ ತೀರ್ಮಾನ ಮಾಡಲಿ ಎಂದು ಕಿಡಿ ಕಾರಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗೆ ಗುರುವಾರ ಪ್ರತಿಕ್ರಿಯೆ ನೀಡಿದರು.

ಟನಲ್ ರಸ್ತೆ ಯೋಜನೆಯನ್ನು ತಂತ್ರಜ್ಞರ ಅಭಿಪ್ರಾಯ ಪಡೆದು ಮಾಡಬೇಕಿತ್ತು ಎನ್ನುವ ಹೇಳಿಕೆಯ ಬಗ್ಗೆ ಕೇಳಿದಾಗ ಉತ್ತರಿಸಿದ ಡಿಸಿಎಂ ಅವರು, ಏನೋ ಹೋಗಲಿ ಅಂತ ಗೌರವ ಕೊಟ್ಟು ನನ್ನ ಜೊತೆ ಮಾತನಾಡಲು ಅವಕಾಶ ನೀಡಿದರೆ ಏನೇನೋ ಮಾತನಾಡುತ್ತಿದ್ದಾನೆ. ಆದರೆ ನಾನು ಆತನ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಸಂಸದ ತೇಜಸ್ವಿ ಸೂರ್ಯನಿಗೆ ಪ್ರಪಂಚ ಹೇಗಿದೆ ಎಂದೇ ಗೊತ್ತಿಲ್ಲ ಎಂದರು.

ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ..?
“ನಾನು ಹುಡುಗನ ಬಳಿ ಕಾರಿಲ್ಲದಿದ್ದರೆ ಹೆಣ್ಣು ನೀಡುವುದಿಲ್ಲ ಎಂದಿದ್ದೆ. ಅದನ್ನೇ ಹಿಡಿದುಕೊಂಡು ಮಾತಾಡುತ್ತಿದ್ದಾನೆ. ಈತ ಏಕೆ ಕಾರಲ್ಲಿ ಓಡಾಡುತ್ತಿದ್ದಾನೆ? ಆತ, ಆತನ ಕುಟುಂಬ ಸದಸ್ಯರು ಮೆಟ್ರೋ, ಸರ್ಕಾರಿ ಬಸ್ ಬಳಸಲಿ. ಅವರ ಪಕ್ಷದ ಶಾಸಕರು ಮೆಟ್ರೋ, ಆಟೋರಿಕ್ಷಾ, ಸಾರ್ವಜನಿಕ‌ ಸಾರಿಗೆಗಳಲ್ಲಿ ಓಡಾಡಲಿ. ಬೇಡ ಎಂದವರಾರು? ಇವರಿಗೆ ಕಾರುಗಳು ಏಕೆ ಬೇಕು? ಬೆಂಗಳೂರಿನಲ್ಲಿ 1.30 ಕೋಟಿಗೂ ಹೆಚ್ಚು ವಾಹನಗಳಿವೆ ಎಂಬುದನ್ನು ಆತ ಅರ್ಥ ಮಾಡಿಕೊಳ್ಳಬೇಕು, ಅವರಿಗೆಲ್ಲ ವಾಹನ ಬಳಸಬೇಡಿ ಎಂದು ಹೇಳಲು ಆಗುತ್ತದೆಯೇ” ಎಂದು ತಿವಿದರು.

ಇದನ್ನೂ ಓದಿ:-ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ನಟ ಪ್ರಕಾಶ್‌ ರಾಜ್‌ ಸೇರಿದಂತೆ 70 ಮಂದಿ ಸಾಧಕರ ಆಯ್ಕೆ..

ಮದುವೆ ಮಾಡಿಸಲು ಈ ಯೋಜನೆ ಕೈಗೆತ್ತಿಕೊಂಡಿದ್ದಾರೆ ಎನ್ನುವ ಟೀಕೆಯ ಬಗ್ಗೆ ಕೇಳಿದಾಗ, “ಅದಕ್ಕೆ ನಾನು ಆತನನ್ನು ಎಳಸು ಎಂದು ಕರೆದಿದ್ದು. ನೀವೆಲ್ಲರೂ ಕ್ಯಾಮೆರಾ ಹಿಡಿದುಕೊಂಡು (ಮಾಧ್ಯಮದವರು) ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಿಕೊಂಡು ಕೆಲಸ ಮಾಡಲು ಆಗುತ್ತದೆಯೇ? ಶಾಲಾ ಮಕ್ಕಳನ್ನು ಶಾಲಾ ವಾಹನದಲ್ಲಿ ಕಳುಹಿಸುತ್ತಾರೆ. ಅವರಿಗೆ ಸಾರ್ವಜನಿಕ ಸಾರಿಗೆಯಲ್ಲಿ‌ ಕಳುಹಿಸಿ ಎಂದು ಹೇಳಲು ಆಗುತ್ತದೆಯೇ?” ಎಂದರು.

“ಈ ರಾಜ್ಯಕ್ಕೆ ಮೆಟ್ರೋ ತಂದವರು ನಾವು. ಅವರಿಗೆ ಅಧಿಕಾರ ಇದ್ದಾಗ ಏನು ಮಾಡಿದ್ದಾರೆ? ಕೇಂದ್ರದಿಂದ ಏನು ತೆಗೆದುಕೊಂಡು ಬಂದಿದ್ದಾರೆ? ಬೆಂಗಳೂರಲ್ಲಿ ಎಷ್ಟು ಪಿಲ್ಲರ್ ಹಾಕಿದ್ದಾರೆ? ಯೋಜನೆಗೆ ಹಣವೆಷ್ಟು ತಂದಿದ್ದಾರೆ? ಕೇಂದ್ರ ಸರ್ಕಾರ ಮೆಟ್ರೋ ಯೋಜನೆಗೆ ಶೇ. 11-12 ರಷ್ಟು ಹಣ ನೀಡುತ್ತಿದೆ. ಭೂ ಪರಿಹಾರ ಸೇರಿದಂತೆ ಎಲ್ಲವನ್ನೂ ನಾವೇ ನೀಡುತ್ತಿದ್ದೇವೆ” ಎಂದರು.

ಹೀ ಇಸ್ ವೇಸ್ಟ್ ಮೆಟಿರಿಯಲ್
“ಅವನ ಬಗ್ಗೆ ನನ್ನ ಬಳಿ ಯಾವ ಪ್ರಶ್ನೆಯನ್ನೂ ಕೇಳಬೇಡಿ. ಹೋಲಿಕೆ ಮಾಡಬೇಡಿ. ಹೀ ಇಸ್ ಎ ವೇಸ್ಟ್ ಮೆಟಿರಿಯಲ್, ಖಾಲಿ ಟ್ರಂಕ್ ಆತ. ಅವರ ಪಕ್ಷದ ಹಿರಿಯ ನಾಯಕರಾದ ಅಶೋಕ್, ಅಶ್ವತ್ಥ ನಾರಾಯಣ್, ಬಸವರಾಜ ಬೊಮ್ಮಾಯಿ,‌ ಜಗದೀಶ್‌ ಶೆಟ್ಟರ್ ಅಂತಹವರು ಮಾತನಾಡಿದರೆ ಉತ್ತರ ನೀಡೋಣ. ಏಕೆಂದರೆ ‌ಅವರಿಗೆ ಇದೆಲ್ಲವೂ ಅರ್ಥವಾಗುತ್ತದೆ. ಬೆಂಗಳೂರಿನಲ್ಲಿ ಬಿಆರ್ ಟಿಎಸ್ ಮಾಡಲು ಎಲ್ಲಿ ಜಾಗವಿದೆ? ಭೂ ಪರಿಹಾರ ಎಷ್ಟಾಗುತ್ತದೆ ಎನ್ನುವ ಅರಿವು ತೇಜಸ್ವಿ ಸೂರ್ಯನಿಗೆ ತಲೆಯಲ್ಲಿಯೇ ಇಲ್ಲ” ಎಂದರು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

4 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

15 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

15 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

15 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

15 hours ago