ರಾಜ್ಯ

ಆ. 28ರಂದು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಇದೇ ಆಗಸ್ಟ್‌ 28ರ ಬುಧವಾರದಂದು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಬ್ಲಾಕ್‌ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು ಅಂತಿಮ ಹಂತ ಎಂಬ 5 ಹಂತಗಳು ಇರಲಿವೆ. ಪ್ರಥಮ ಬಹುಮಾನ ಪಡೆದ ತಂಡಕ್ಕೆ 40 ಸಾವಿರ ರೂ., ಹಾಗೂ ಪ್ರಶಂಸಾ ಪತ್ರ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30 ಸಾವಿರ ರೂ. ಮತ್ತು ತೃತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಬಹುಮಾನ ವಿತರಿಸಲಾಗುತ್ತದೆ.

ಪ್ರತಿ ಪ್ರೌಢಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳುಳ್ಳ ಒಂದು ತಂಡಕ್ಕೆ ಇದರಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಒಂದು ತಂಡದಲ್ಲಿ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ ಇರತಕ್ಕದ್ದು. ಬಾಲಕಿಯರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕಿಯರು ಮತ್ತು ಬಾಲಕರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕರು ಭಾಗವಹಿಸಲು ಅವಕಾಶವಿರುತ್ತದೆ. 8,9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧಿಗಳಿಗೆ ನಿಬಂಧನೆಗಳು:

– ಆಯ್ಕೆಯಾದ ಸ್ಪರ್ಧಿಗಳು ತಾವು ಓದುತ್ತಿರುವ ಶಾಲೆ ಹಾಗೂ ತರಗತಿಯ ಬಗ್ಗೆ ಪುರಾವೆ ನೀಡಬೇಕು.
– ಯಾವುದೇ ಸ್ಪರ್ಧಿಯ ವರ್ತನೆ / ಭಾಗವಹಿಸುವಿಕೆ ನಿಯಮ ಬಾಹಿರವೆಂದು ಕಂಡುಬಂದಲ್ಲಿ ಸ್ಪರ್ಧಿಯನ್ನು ಅನರ್ಹಗೊಳಿಸಲಾಗುವುದು.
– ಅರ್ಹತೆ, ಸ್ಪರ್ಧಿಯ ದೃಢೀಕರಣ ಮತ್ತು ಇತರ ನಿರ್ಧಾರಗಳ ಹಕ್ಕನ್ನು ಜವಾಹರಲಾಲ್‌ ನೆಹರು ತಾರಾಲಯ, ಬೆಂಗಳೂರು ಹೊಂದಿರುತ್ತದೆ.
– ಸೂಕ್ತ ಸಂದರ್ಭಗಳಲ್ಲಿ ಎಲ್ಲಾ ಹಂತಗಳಲ್ಲೂ ಪರೀಕ್ಷೆಯಲ್ಲಿ ಬದಲಾವಣೆ ಮಾಡುವ ಹಕ್ಕು ಜವಾಹರಲಾಲ್ ನೆಹರು ತಾರಾಲಯ ಹೊಂದಿರುತ್ತದೆ.
– ಯಾವುದೇ ಸಂದರ್ಭದಲ್ಲಿ ಸ್ಪರ್ಧೆಯ ಆಯೋಜಕರಾದ ಜವಾಹರಲಾಲ್ ನೆಹರು ತಾರಾಲಯದ ತೀರ್ಪು ಅಂತಿಮವಾಗಿರುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

4 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

5 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

5 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

6 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

6 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

7 hours ago