ರಾಜ್ಯ

ಆ. 28ರಂದು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

ಬೆಂಗಳೂರು: ಜವಾಹರಲಾಲ್‌ ನೆಹರು ತಾರಾಲಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಕನ್ನಡದಲ್ಲಿ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಇದೇ ಆಗಸ್ಟ್‌ 28ರ ಬುಧವಾರದಂದು ಆಯೋಜಿಸಲಾಗಿದೆ.

ಸ್ಪರ್ಧೆಯಲ್ಲಿ ಬ್ಲಾಕ್‌ ಹಂತ, ಜಿಲ್ಲಾ ಮಟ್ಟ, ವಿಭಾಗೀಯ ಮಟ್ಟ, ರಾಜ್ಯ ಮಟ್ಟ ಮತ್ತು ಅಂತಿಮ ಹಂತ ಎಂಬ 5 ಹಂತಗಳು ಇರಲಿವೆ. ಪ್ರಥಮ ಬಹುಮಾನ ಪಡೆದ ತಂಡಕ್ಕೆ 40 ಸಾವಿರ ರೂ., ಹಾಗೂ ಪ್ರಶಂಸಾ ಪತ್ರ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 30 ಸಾವಿರ ರೂ. ಮತ್ತು ತೃತೀಯ ಸ್ಥಾನ ಪಡೆದ ತಂಡಕ್ಕೆ 10 ಸಾವಿರ ರೂ. ಬಹುಮಾನ ವಿತರಿಸಲಾಗುತ್ತದೆ.

ಪ್ರತಿ ಪ್ರೌಢಶಾಲೆಗಳಿಂದ ಇಬ್ಬರು ವಿದ್ಯಾರ್ಥಿಗಳುಳ್ಳ ಒಂದು ತಂಡಕ್ಕೆ ಇದರಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಒಂದು ತಂಡದಲ್ಲಿ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ ಇರತಕ್ಕದ್ದು. ಬಾಲಕಿಯರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕಿಯರು ಮತ್ತು ಬಾಲಕರ ಶಾಲೆಯಾಗಿದ್ದಲ್ಲಿ ಇಬ್ಬರು ಬಾಲಕರು ಭಾಗವಹಿಸಲು ಅವಕಾಶವಿರುತ್ತದೆ. 8,9 ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧಿಗಳಿಗೆ ನಿಬಂಧನೆಗಳು:

– ಆಯ್ಕೆಯಾದ ಸ್ಪರ್ಧಿಗಳು ತಾವು ಓದುತ್ತಿರುವ ಶಾಲೆ ಹಾಗೂ ತರಗತಿಯ ಬಗ್ಗೆ ಪುರಾವೆ ನೀಡಬೇಕು.
– ಯಾವುದೇ ಸ್ಪರ್ಧಿಯ ವರ್ತನೆ / ಭಾಗವಹಿಸುವಿಕೆ ನಿಯಮ ಬಾಹಿರವೆಂದು ಕಂಡುಬಂದಲ್ಲಿ ಸ್ಪರ್ಧಿಯನ್ನು ಅನರ್ಹಗೊಳಿಸಲಾಗುವುದು.
– ಅರ್ಹತೆ, ಸ್ಪರ್ಧಿಯ ದೃಢೀಕರಣ ಮತ್ತು ಇತರ ನಿರ್ಧಾರಗಳ ಹಕ್ಕನ್ನು ಜವಾಹರಲಾಲ್‌ ನೆಹರು ತಾರಾಲಯ, ಬೆಂಗಳೂರು ಹೊಂದಿರುತ್ತದೆ.
– ಸೂಕ್ತ ಸಂದರ್ಭಗಳಲ್ಲಿ ಎಲ್ಲಾ ಹಂತಗಳಲ್ಲೂ ಪರೀಕ್ಷೆಯಲ್ಲಿ ಬದಲಾವಣೆ ಮಾಡುವ ಹಕ್ಕು ಜವಾಹರಲಾಲ್ ನೆಹರು ತಾರಾಲಯ ಹೊಂದಿರುತ್ತದೆ.
– ಯಾವುದೇ ಸಂದರ್ಭದಲ್ಲಿ ಸ್ಪರ್ಧೆಯ ಆಯೋಜಕರಾದ ಜವಾಹರಲಾಲ್ ನೆಹರು ತಾರಾಲಯದ ತೀರ್ಪು ಅಂತಿಮವಾಗಿರುತ್ತದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

7 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

10 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

10 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

10 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

11 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

11 hours ago