Thawar Chand Gehlot letter
ಬೆಂಗಳೂರು: 18 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಧಾನಸಭೆಯ 18 ಬಿಜೆಪಿ ಸದಸ್ಯರ (ಶಾಸಕರು) ಅಮಾನತು ರದ್ದುಗೊಳಿಸುವ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ಸ್ಪೀಕರ್ಗೆ ಬರೆದ ಪ್ರತ್ಯೇಕ ಪತ್ರಗಳಲ್ಲಿ, ರಾಜ್ಯದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಮೂಲ ತತ್ವಗಳನ್ನು ಎತ್ತಿಹಿಡಿಯಲು ಮತ್ತು ಅಮಾನತುಗೊಂಡ ಶಾಸಕರು ಮತ್ತೆ ಜನ ಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಅನುವು ಮಾಡಿಕೊಡುವಂತಹ ನಿರ್ಧಾರ ತೆಗೆದುಕೊಳ್ಳಬೇಕೆಂಬ “ಆಸೆ”ಯನ್ನು ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯಪಾಲರನ್ನು ಭೇಟಿಯಾಗಿ ಶಾಸಕರ ಅಮಾನತು ಸಂಬಂಧ ಸೋಮವಾರ ದೂರು ನೀಡಿದ್ದರು. ಅಮಾನತು ತೆರವುಗೊಳಿಸಿ ಶಾಸಕರಿಗೆ ತಮ್ಮ ಅಧಿಕಾರ ಚಲಾಯಿಸಲು ಅನುವು ಮಾಡಿಕೊಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತ್ತು. ಇದೀಗ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ಗೆ ಪತ್ರ ಬರೆದು, 18 ಬಿಜೆಪಿ ಶಾಸಕರ ಅಮಾನತು ತೆರವುಗೊಳಿಸುವಂತೆ ಸಲಹೆ ನೀಡಿದ್ದಾರೆ.
ಉಭಯ ಸದನದ ಬಿಜೆಪಿ ವಿಪಕ್ಷ ನಾಯಕರು ನನ್ನನ್ನು ಭೇಟಿಯಾಗಿ 18 ಬಿಜೆಪಿ ಶಾಸಕರ ಅಮಾನತು ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ. 18 ಶಾಸಕರ ಅಮಾನತು ಆದೇಶವನ್ನು ಮರುಪರಿಗಣಿಸುವ ಅವರ ಕೋರಿಕೆಯನ್ನು ಸ್ಪೀಕರ್ ಹಾಗೂ ರಾಜ್ಯ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ದೃಷ್ಟಿಯಿಂದ ಹಾಗೂ ಜನಪ್ರತಿನಿಧಿಯಾಗಿ ಅಮಾನತುಗೊಂಡ ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪುನರಾರಂಭಿಸಲು ಅನುವು ಮಾಡಿಕೊಡಲು ಬಿಜೆಪಿ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, 18 ಸದಸ್ಯರ ಅಮಾನತು ಆದೇಶ ರದ್ದತಿಗೆ ಅಗತ್ಯ ಕ್ರಮ ಕೈಗೊಳ್ಳಲು ಬಯಸುತ್ತೇನೆ. ಈ ಸಂಬಂಧ ಕೈಗೊಳ್ಳಲಾದ ಕ್ರಮವನ್ನು ನನ್ನ ಗಮನಕ್ಕೆ ತನ್ನಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ.
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…
ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ…
ಬೆಂಗಳೂರು: ಈ ವರ್ಷ ಚಳಿ ಪ್ರಮಾಣ ಹೆಚ್ಚಾಗಿದ್ದರಿಂದ ಬಿಸಿಲ ಝಳವೂ ಹೆಚ್ಚಾಗಿರಲಿದ್ದು, ಮುಂದಿನ ಬೇಸಿಗೆಯಲ್ಲಿ ವಿಪರೀತ ಬಿಸಿಲು ಹವಾಮಾನ ಇರಲಿದೆ…
ಬೆಂಗಳೂರು: ರಾಜ್ಯದಲ್ಲಿರುವ ಅಷ್ಟೂ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮಗಾಂಧಿ ಹೆಸರು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ…