Thawar Chand Gehlot letter
ಬೆಂಗಳೂರು: 18 ಮಂದಿ ಬಿಜೆಪಿ ಶಾಸಕರ ಅಮಾನತು ರದ್ದುಗೊಳಿಸುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಪತ್ರ ಬರೆದಿದ್ದಾರೆ.
ವಿಧಾನಸಭೆಯ 18 ಬಿಜೆಪಿ ಸದಸ್ಯರ (ಶಾಸಕರು) ಅಮಾನತು ರದ್ದುಗೊಳಿಸುವ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸುವಂತೆ ಮತ್ತು ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿ ಮತ್ತು ಸ್ಪೀಕರ್ಗೆ ಬರೆದ ಪ್ರತ್ಯೇಕ ಪತ್ರಗಳಲ್ಲಿ, ರಾಜ್ಯದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಮೂಲ ತತ್ವಗಳನ್ನು ಎತ್ತಿಹಿಡಿಯಲು ಮತ್ತು ಅಮಾನತುಗೊಂಡ ಶಾಸಕರು ಮತ್ತೆ ಜನ ಪ್ರತಿನಿಧಿಗಳಾಗಿ ತಮ್ಮ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ಅನುವು ಮಾಡಿಕೊಡುವಂತಹ ನಿರ್ಧಾರ ತೆಗೆದುಕೊಳ್ಳಬೇಕೆಂಬ “ಆಸೆ”ಯನ್ನು ರಾಜ್ಯಪಾಲರು ವ್ಯಕ್ತಪಡಿಸಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯಪಾಲರನ್ನು ಭೇಟಿಯಾಗಿ ಶಾಸಕರ ಅಮಾನತು ಸಂಬಂಧ ಸೋಮವಾರ ದೂರು ನೀಡಿದ್ದರು. ಅಮಾನತು ತೆರವುಗೊಳಿಸಿ ಶಾಸಕರಿಗೆ ತಮ್ಮ ಅಧಿಕಾರ ಚಲಾಯಿಸಲು ಅನುವು ಮಾಡಿಕೊಡುವಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿತ್ತು. ಇದೀಗ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ಗೆ ಪತ್ರ ಬರೆದು, 18 ಬಿಜೆಪಿ ಶಾಸಕರ ಅಮಾನತು ತೆರವುಗೊಳಿಸುವಂತೆ ಸಲಹೆ ನೀಡಿದ್ದಾರೆ.
ಉಭಯ ಸದನದ ಬಿಜೆಪಿ ವಿಪಕ್ಷ ನಾಯಕರು ನನ್ನನ್ನು ಭೇಟಿಯಾಗಿ 18 ಬಿಜೆಪಿ ಶಾಸಕರ ಅಮಾನತು ಸಂಬಂಧ ಮನವಿ ಪತ್ರ ಸಲ್ಲಿಸಿದ್ದಾರೆ. 18 ಶಾಸಕರ ಅಮಾನತು ಆದೇಶವನ್ನು ಮರುಪರಿಗಣಿಸುವ ಅವರ ಕೋರಿಕೆಯನ್ನು ಸ್ಪೀಕರ್ ಹಾಗೂ ರಾಜ್ಯ ಸರ್ಕಾರಕ್ಕೆ ಕಳುಹಿಸಿ ಕೊಡುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಪಾಲರು ಪತ್ರದಲ್ಲಿ ತಿಳಿಸಿದ್ದಾರೆ.
ರಾಜ್ಯದ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯುವ ದೃಷ್ಟಿಯಿಂದ ಹಾಗೂ ಜನಪ್ರತಿನಿಧಿಯಾಗಿ ಅಮಾನತುಗೊಂಡ ಶಾಸಕರುಗಳು ತಮ್ಮ ಜವಾಬ್ದಾರಿಯನ್ನು ಪುನರಾರಂಭಿಸಲು ಅನುವು ಮಾಡಿಕೊಡಲು ಬಿಜೆಪಿ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, 18 ಸದಸ್ಯರ ಅಮಾನತು ಆದೇಶ ರದ್ದತಿಗೆ ಅಗತ್ಯ ಕ್ರಮ ಕೈಗೊಳ್ಳಲು ಬಯಸುತ್ತೇನೆ. ಈ ಸಂಬಂಧ ಕೈಗೊಳ್ಳಲಾದ ಕ್ರಮವನ್ನು ನನ್ನ ಗಮನಕ್ಕೆ ತನ್ನಿ ಎಂದು ರಾಜ್ಯಪಾಲರು ಸೂಚಿಸಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…