ರಾಜ್ಯ

ಬಜ್‌ಟ್‌ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೆ ತರಲು ವಾರದ ಗಡುವು ನೀಡಿದ  ಕೃಷಿ ಸಚಿವರು

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.

2024-25 ರ ಆಯವ್ಯಯಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ‌ಆದೇಶ ಹೊರಡಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.

ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕ ಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು ಇದು ಸಮರ್ಪಕವಾಗಿ ತಲುಪಬೇಕು, ಇದು ರಾಜ್ಯ ಸರ್ಕಾರದ ಆಶಯ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಚಲುವರಾಯ ಸ್ವಾಮಿ ಹೇಳಿದರು.

ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ. ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ತಿಳಿಸಿ ಎಂದ ಕೃಷಿ ಸಚಿವರು, ಪ್ರತ್ಯೇಕ ಆಹಾರ ಸಂಸ್ಕೃರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ ಎಂದರು.

ಕರ್ನಾಟಕ ರೈತ ಸಮೃದ್ದಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ‌ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು ವ್ಯವಸ್ಥಿತ ಚಾಲನೆ ನೀಡಬೇಕು ಎಂದು ಚಲುವರಾಯಸ್ವಾಮಿ ಸೂಚಿಸಿದರು.

ಬೆಂಗಳೂರಿನಲ್ಲಿ ಆರ್.ಕೆ ಶಾಲಾ ಕೃಷಿ ಕ್ಷೇತ್ರವನ್ನು ತಾಂತ್ರಿಕತೆ ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಿ ರೈತರಿಗೆ ಕೀಟ /ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ ಸಲಹೆ ನೀಡಲು ಇ-ಸ್ಯಾಪ್ ತಂತ್ರಾಂಶ ಸರಿಯಾಗಿ ಬಳಸಬೇಕು ಅದನ್ನು ಉಪಯೋಗಿಸುವವರಿಗೆ ಸೂಕ್ತ ತರಬೇತಿ ಒದಗಿಸಿ ಎಂದು ಸಚಿವರು ತಿಳಿಸಿದರು.

ಮಿಷಿನ್ ಲರ್ನಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಬೆಳೆ ಉತ್ಪಾದಕತೆ ಮುನ್ಸೂಚಿಸಲು ದತ್ತಾಂಶ ಅಭಿವೃದ್ಧಿ ಪಡಿಸಿ, ರೈತ ಉತ್ಪಾದಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಅ್ಯಕ್ಸಿಲೇಟರ್ ಪ್ಲ್ಯಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಫ್ ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಜೊತೆಗ ಇಲಾಖೆ ಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣಗೊಳಿಸಿ ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸಚಿವರು ಸೂಚನೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತೆಕ್ಕಲಕೋಟೆ | ಉತ್ಖನನ ವೇಳೆ ಎರಡು ಅಸ್ಥಿ ಪಂಜರ ಪತ್ತೆ

ಬಳ್ಳಾರಿ : ಜಿಲ್ಲೆಯಲ್ಲಿ ಐದು ಸಾವಿರ ವರ್ಷಗಳಷ್ಟು ಹಳೆಯದಾದ ಪ್ರಾಗೈತಿಹಾಸಿಕ ಕಾಲದ ಎರಡು ಅಸ್ಥಿ ಪಂಜರಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧನಾ…

5 mins ago

ಮಂಡ್ಯದಲ್ಲಿ ಎಆರ್‌ಎಐ ಸೆಂಟರ್‌ ತೆರೆಯಲು 500 ಕೋಟಿ ರೂ. : ಎಚ್‌ಡಿಕೆ

ಮೈಸೂರು : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆ, ಉತ್ತೇಜನಕ್ಕೆ ಕೇಂದ್ರಸರ್ಕಾರ ಆದ್ಯತೆ ನೀಡಿರುವ ಜತೆಗೆ, ಮಂಡ್ಯ ಜಿಲ್ಲೆಯಲ್ಲಿ ಆಟೋಮೋಟಿವ್ ರೀಸರ್ಚ್ ಅಸೋಸಿಯೆಷನ್…

29 mins ago

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

57 mins ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

2 hours ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

3 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

3 hours ago