ರಾಜ್ಯ

ಬಜ್‌ಟ್‌ನಲ್ಲಿ ಘೋಷಿಸಿದ ಯೋಜನೆಗಳನ್ನು ಜಾರಿಗೆ ತರಲು ವಾರದ ಗಡುವು ನೀಡಿದ  ಕೃಷಿ ಸಚಿವರು

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಹೊಸ ಕೃಷಿ ಯೋಜನೆಗಳನ್ನು ಜೂ 20 ರೊಳಗೆ ಅನುಷ್ಠಾನಕ್ಕೆ ತರುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕಟ್ಟುನಿಟ್ಟಿನ‌ ಸೂಚನೆ ನೀಡಿದ್ದಾರೆ.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ 2024-25 ನೇ ಸಾಲಿನ ಆಯವ್ಯಯದಲ್ಲಿ ಘೋಷಣೆಯಾಗಿರುವ ಕೃಷಿ ಇಲಾಖೆ ಹೊಸ ಯೋಜನೆಗಳ ಅನುಷ್ಠಾನ ಕುರಿತು ಇಲಾಖೆ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಈ ನಿರ್ದೇಶನ ನೀಡಿದರು.

2024-25 ರ ಆಯವ್ಯಯಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರಿ ಆದೇಶ ಹೊರಡಿಸಿದ್ದು ಬಾಕಿ ಉಳಿದ 7 ಘೋಷಣೆಗಳಿಗೆ ವಾರದೊಳಗೆ ಸರ್ಕಾರಿ ‌ಆದೇಶ ಹೊರಡಿಸಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಎಂದು ಸೂಚಿಸಿದರು.

ಸರ್ಕಾರದಲ್ಲಿ ಅನುದಾನಕ್ಕೆ ಕೊರತೆ ಇಲ್ಲ. ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕ ಗೊಳಿಸಲು ರೈತ ಸಮೃದ್ದಿ ಯೋಜನೆ ರೂಪಿಸಿದ್ದು ಇದು ಸಮರ್ಪಕವಾಗಿ ತಲುಪಬೇಕು, ಇದು ರಾಜ್ಯ ಸರ್ಕಾರದ ಆಶಯ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಒಳಗೊಂಡಂತೆ ವಿವಿಧ ಇಲಾಖೆಗಳ ಯೋಜನೆಗಳ ಸಂಯೋಜನೆ ಮೂಲಕ ಕಾರ್ಯಕ್ರಮ ಅನುಷ್ಠಾನ ಮಾಡಬೇಕು ಎಂದು ಚಲುವರಾಯ ಸ್ವಾಮಿ ಹೇಳಿದರು.

ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಪೂರ್ವಾವಲೋಕನ ಆಗಬೇಕಿದೆ. ಈ ಬಗ್ಗೆ ಅಧಿಕಾರಿಗಳು ಚರ್ಚಿಸಿ ಅಭಿಪ್ರಾಯ ತಿಳಿಸಿ ಎಂದ ಕೃಷಿ ಸಚಿವರು, ಪ್ರತ್ಯೇಕ ಆಹಾರ ಸಂಸ್ಕೃರಣೆ ಮತ್ತು ರಪ್ತು ಉತ್ತೇಜನ ಆಯುಕ್ತಾಲಯ ಸ್ಥಾಪನೆ ಮತ್ತು ಕೆಲ ಸಂಸ್ಥೆಗಳನ್ನು ಅದರ ವ್ಯಾಪ್ತಿಗೆ ತರುವ ಬಗ್ಗೆ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಪ್ರಸ್ತಾವನೆ ಸಿದ್ದಪಡಿಸಿ ಎಂದರು.

ಕರ್ನಾಟಕ ರೈತ ಸಮೃದ್ದಿ ಯೋಜನೆ, ಕೃಷಿ ಅಭಿವೃದ್ಧಿ ಪ್ರಾಧಿಕಾರ, ಕೃಷಿ ಭಾಗ್ಯ ಯೋಜನೆ, ಸಮುದಾಯದ ಬೀಜ‌ ಬ್ಯಾಂಕ್ ಸ್ಥಾಪನೆ, ನಮ್ಮ ಮಿಲೆಟ್ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಆಗಬೇಕು ವ್ಯವಸ್ಥಿತ ಚಾಲನೆ ನೀಡಬೇಕು ಎಂದು ಚಲುವರಾಯಸ್ವಾಮಿ ಸೂಚಿಸಿದರು.

ಬೆಂಗಳೂರಿನಲ್ಲಿ ಆರ್.ಕೆ ಶಾಲಾ ಕೃಷಿ ಕ್ಷೇತ್ರವನ್ನು ತಾಂತ್ರಿಕತೆ ಪಸರಿಸುವ ಜ್ಞಾನ ಕೇಂದ್ರವನ್ನಾಗಿ ಅಭಿವೃದ್ಧಿ ಪಡಿಸಿ ರೈತರಿಗೆ ಕೀಟ /ರೋಗ ಮತ್ತು ಪೋಷಕಾಂಶಗಳ ನಿರ್ವಹಣೆ ಸಲಹೆ ನೀಡಲು ಇ-ಸ್ಯಾಪ್ ತಂತ್ರಾಂಶ ಸರಿಯಾಗಿ ಬಳಸಬೇಕು ಅದನ್ನು ಉಪಯೋಗಿಸುವವರಿಗೆ ಸೂಕ್ತ ತರಬೇತಿ ಒದಗಿಸಿ ಎಂದು ಸಚಿವರು ತಿಳಿಸಿದರು.

ಮಿಷಿನ್ ಲರ್ನಿಂಗ್ ನಂತಹ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಬೆಳೆ ಉತ್ಪಾದಕತೆ ಮುನ್ಸೂಚಿಸಲು ದತ್ತಾಂಶ ಅಭಿವೃದ್ಧಿ ಪಡಿಸಿ, ರೈತ ಉತ್ಪಾದಕತೆ ಸಂಸ್ಥೆಗಳಿಗೆ ಬೆಂಬಲ ನೀಡಲು ಅಗ್ರಿ ಅ್ಯಕ್ಸಿಲೇಟರ್ ಪ್ಲ್ಯಾಟ್ ಫಾರ್ಮ್ ಮೂಲಕ ಕೃಷಿ ವಲಯದ ಸ್ಟಾರ್ಟಫ್ ಗಳನ್ನು ಉತ್ತೇಜಿಸುವ ಅನುಷ್ಠಾನ ಚುರುಕುಗೊಳಿಸಿ ಜೊತೆಗ ಇಲಾಖೆ ಯಲ್ಲಿ ಬಾಕಿ ಉಳಿದ ಕಡತಗಳನ್ನು ಪೂರ್ಣಗೊಳಿಸಿ ವಿಲೇವಾರಿಯಾಗುವಂತೆ ನಿಗಾವಹಿಸಿ ಎಂದು ಸಚಿವರು ಸೂಚನೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

13 mins ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

31 mins ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

2 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

3 hours ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

4 hours ago