Mysore
19
overcast clouds
Light
Dark

ಬ್ರಾಂಡ್ ಬೆಂಗಳೂರನ್ನು ದೇಶದಲ್ಲೇ ನಂಬರ್ ಒನ್ ಆಗಿಸಬೇಕಿದೆ: ಸಿಎಂ

ಬೆಂಗಳೂರು : ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ. ರಾಜ್ಯದಲ್ಲಿ ಶೇ38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರೆಲ್ಲರಿಗೂ ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಮುನಿಸಿಪಾಲಿಕಾ-2023” 17 ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನಾವು ನಗರ ಪ್ರದೇಶದ ಕುಡಿಯುವ ನೀರಿಗೆ 9 ಸಾವಿರ ಕೋಟಿ ಕೊಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನಮಟ್ಟ ಇನ್ನಷ್ಟು ಸುಗಮಗೊಳಿಸಲು ಅಗತ್ಯ ಇರುವ ಎಲ್ಲಾ ವಲಯಗಳಿಗೂ ಸರ್ಕಾರ ಅನುದಾನವನ್ನು ಒದಗಿಸುತ್ತಿದೆ. ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾಗವೂ ಸುಸ್ಥಿರ ಬೆಳವಣಿಗೆ ಕಾಣಬೇಕು. ಎಂದರು.

ಈ ಬಾರಿ ನಾವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದ್ದೇವೆ. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದು ವಿವರಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್‌, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ತಮ್ಮಯ್ಯ ಎಂಎಲ್ಸಿ ಎಸ್‌ ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘ‌ರ್ ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಕಮಿಷನ‌ರ್ ಜಯರಾಮ್ ಮತ್ತಿತರರು ಹಾಜರಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ