ರಾಜ್ಯ

ಬ್ರಾಂಡ್ ಬೆಂಗಳೂರನ್ನು ದೇಶದಲ್ಲೇ ನಂಬರ್ ಒನ್ ಆಗಿಸಬೇಕಿದೆ: ಸಿಎಂ

ಬೆಂಗಳೂರು : ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ. ರಾಜ್ಯದಲ್ಲಿ ಶೇ38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ. ಇವರೆಲ್ಲರಿಗೂ ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ ಒಳಚರಂಡಿ ವ್ಯವಸ್ಥೆ ಸೇರಿ ನಾಗರಿಕ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ. ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಮುನಿಸಿಪಾಲಿಕಾ-2023” 17 ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ನಾವು ನಗರ ಪ್ರದೇಶದ ಕುಡಿಯುವ ನೀರಿಗೆ 9 ಸಾವಿರ ಕೋಟಿ ಕೊಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನಮಟ್ಟ ಇನ್ನಷ್ಟು ಸುಗಮಗೊಳಿಸಲು ಅಗತ್ಯ ಇರುವ ಎಲ್ಲಾ ವಲಯಗಳಿಗೂ ಸರ್ಕಾರ ಅನುದಾನವನ್ನು ಒದಗಿಸುತ್ತಿದೆ. ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾಗವೂ ಸುಸ್ಥಿರ ಬೆಳವಣಿಗೆ ಕಾಣಬೇಕು. ಎಂದರು.

ಈ ಬಾರಿ ನಾವು ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ತೆರೆಯುತ್ತಿದ್ದೇವೆ. ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದು ವಿವರಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್‌, ಪೌರಾಡಳಿತ ಸಚಿವ ರಹೀಮ್ ಖಾನ್, ಶಾಸಕ ತಮ್ಮಯ್ಯ ಎಂಎಲ್ಸಿ ಎಸ್‌ ರವಿ, ಆಸ್ಟ್ರೇಲಿಯಾ ವ್ಯಾಪಾರ ಮತ್ತು ಹೂಡಿಕೆ ಆಯೋಗದ ಅಧ್ಯಕ್ಷೆ ಕ್ಯಾಥರಿನ್ ಗಲೇಘ‌ರ್ ನಾಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಕಮಿಷನ‌ರ್ ಜಯರಾಮ್ ಮತ್ತಿತರರು ಹಾಜರಿದ್ದರು.

andolanait

Recent Posts

ಅಪ್ರಾಪ್ತನಿಗೆ ದ್ವಿಚಕ್ರ ವಾಹನ ನೀಡಿದ ಪೋಷಕರಿಗೆ 30 ಸಾವಿರ ರೂ.ದಂಡ

ಸಿದ್ದಾಪುರ : ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನ ಪೋಷಕರಿಗೆ ನ್ಯಾಯಾಲಯ ಹಾಗೂ ಬಾಲ…

3 hours ago

ಪ್ರೇಕ್ಷಕರು ಬದಲಾದಾಗ ಭಾಷೆಯಲ್ಲೂ ಬದಲಾವಣೆ ; ಭಾಗವತ್‌ ಕುರಿತು ಖರ್ಗೆ ವ್ಯಂಗ್ಯ

ಬೆಂಗಳೂರು : ಆರ್‌ಎಸ್‌ಎಸ್ ಸಂಘಟನೆಯ ಕಾರ್ಯವೈಖರಿ ಹಾಗೂ ವಿದೇಶದಲ್ಲಿನ ಅದರ ಚಟುವಟಿಕೆಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ಚಿತ್ರಕೂಟ ; ಮಂದಾಕಿನಿ ನದಿ ಪ್ರವಾಹ ಭೀತಿ

ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ…

4 hours ago

ನೇಪಾಳ ಪ್ರವಾಹ ; ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಮೃತರ ಸಂಖ್ಯೆ 750 ಕ್ಕೆ ಏರಿಕೆ; 3,044 ನಾಪತ್ತೆ ಕಠ್ಮಂಡು : ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ…

4 hours ago

ಕೆಪಿಎಸ್‌ಸಿ ಹಗರಣ : ಐಎಎಸ್‌ ಅಧಿಕಾರಿ ಘ್ಯಾನೇಂದ್ರ ಕುಮಾರ್‌ ಬಂಧನ

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ(ಕೆಪಿಎಸ್‌ಸಿ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಘ್ಯಾನೇಂದ್ರ ಕುಮಾರ್‌ ಗಂಗ್ವಾರ್‌ ಅವರನ್ನು ಸಿಐಡಿ…

6 hours ago

ಹನೂರು ಶೂಟ್‌ಔಟ್ ಪ್ರಕರಣ | ಸ್ಥಳ ಮಹಜರ್, ಸಾಕ್ಷಿ ವಿಚಾರಣೆ

ಹನೂರು : ಕಾವೇರಿ ವನ್ಯಜೀವಿಧಾಮದ ಹೊಲೆಮುರಿದಟ್ಟಿ ಕರಿಕಲ್ಲು ಗುಡ್ಡ ಅರಣ್ಯ ಪ್ರದೇಶದಲ್ಲಿ ಶೂಟ್‌ಔಟ್ ನಡೆದ ಸ್ಥಳಕ್ಕೆ ಪ್ರಕರಣದ ಪ್ರಮುಖ ಸಾಕ್ಷಿ…

8 hours ago