ಬೆಂಗಳೂರು: ಬಿಜೆಪಿ ಪಕ್ಷಕ್ಕೇ ಸೇರ್ಪಡೆಯಾಗುವ ಸಂದರ್ಭದಲ್ಲಿ ಜಾಮೂನು, ಮೈಸೂರು ಪಾಕು, ಜಿಲೇಬಿ ಕೊಡುತ್ತಾರೆ. ಅವರ ಕೆಲಸ ಆದ್ಮೇಲೆ ವಿಷ ಕೊಡುತ್ತಾರೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು.
ಕೆಂಗೇರಿ ಉಪನಗರದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿ ನಾಯಕರು ಕದ್ದುಮುಚ್ಚಿ ರಾತ್ರಿ ವೇಳೆ ಸಿಎಂ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುತ್ತಾರೆ. ಆದರೆ ನಾನು ಕ್ಷೇತ್ರದ ಅಭಿವೃದ್ಧಿಗಾಗಿ ರಾಜಾರೋಷವಾಗಿ ಸಿಎಂ, ಡಿಸಿಎಂ ರನನ್ನು ಭೇಟಿ ಮಾಡಿದರೆ ಅದನ್ನೇ ದೊಡ್ಡದು ಮಾಡುತ್ತಾರೆ ಎಂದು ದೂರಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಪುಕ್ಸಟ್ಟೆ ಬಿದ್ದಿಲ್ಲ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಜನತೆ ಗೋ ಬ್ಯಾಕ್ ಗೋ ಬ್ಯಾಕ್ ಎಂದು ಹೇಳಿ ತಿರಸ್ಕಾರ ಮಾಡಿದವರನ್ನು ಇಲ್ಲಿ ಅಭ್ಯರ್ಥಿಯಾಗಿ ಮಾಡುತ್ತಾರೆ ಅದನ್ನು ಒಪ್ಪಬೇಕೇ ಎಂದು ಪ್ರಶ್ನಿಸಿದರು.
ರಾಜ್ಯಸಭೆಯಲ್ಲಿ ಅಡ್ಡ ಮತದಾನದ ವಿಚಾರವನ್ನು ದೊಡ್ಡದು ಮಾಡಿ ಬೀದಿಯಲ್ಲಿ ಪ್ರತಿಭಟನೆ ನಡೆಸಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಮಾಡಿದವರೊಂದಿಗೆ ನಾನು ಹೇಗೆ ಹೋಗಲಿ ಎಂದರು. ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ನಾನು ಮಾಡಿದ ಬಹುದೊಡ್ಡ ತಪ್ಪು ಎಂದು ಇಂದು ಅನಿಸುತ್ತಿದೆ ಎಂದು ಹೇಳಿದರು.
ಕ್ಷೇತ್ರದ ಜನತೆಗಾಗಿ ಹಾಗೂ ಅಭಿವೃದ್ಧಿಗಾಗಿ ಯಾವ ತ್ಯಾಗಕ್ಕೂ ಸಿದ್ಧ ಎಂದರು, ಯಶವಂತಪುರ ಕ್ಷೇತ್ರದಲ್ಲಿ ಆರು ಬಾರಿ ಚುನಾವಣೆಗೆ ನಿಂತಿದ್ದೇನೆ ನಾಲ್ಕು ಬಾರಿ ಗೆದ್ದಿದ್ದೇನೆ ಎರಡು ಬಾರಿ ಸೋತಿದ್ದೇನೆ, ಮಸಲತ್ತು ಮಾಡಿ ನನ್ನನ್ನು ಸೋಲಿಸಲು ಪ್ರಯತ್ನ ಮಾಡಿದವರೊಂದಿಗೆ ಹೆಜ್ಜೆ ಹಾಕಿ ಗಂಡಸತನದ ಬಗ್ಗೆ ಮಾತನಾಡುತ್ತಿರುವ ಜೆಡಿಎಸ್ ಜವರಾಯಿ ಗೌಡರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…