ರಾಜ್ಯ

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ ಈಗ ಚಿಕ್ಕಮಗಳೂರಿನ ಭದ್ರಾದ ಅರಣ್ಯದ ಲಕ್ಕವಳ್ಳಿ ಸಫಾರಿ ವೇಳೆ ಕಪ್ಪು ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ, ವನ್ಯಜೀವಿ ಪ್ರಿಯರನ್ನು ಸೆಳೆಯುತ್ತಿದೆ.

ಹೌದು, ಚಿಕ್ಕಮಗಳೂರಿನ ಭದ್ರಾದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈಗ ಕರಿಚಿರತೆಯೇ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಭದ್ರಾದಲಕ್ಕವಳ್ಳಿ ಬೋಟ್ ಸಫಾರಿ ಹಾಗೂ ಜೀಪ್ ಸಫಾರಿಯ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಈ ಕಪ್ಪು ಚಿರತೆ ನೋಡಲು ಇದೀಗಾ ದೇಶ ವಿದೇಶಗಳಿಂದ ಪ್ರವಾಸಿಗರ ದಂಡೇ ಭದ್ರಗೆ ಹರಿದು ಬರುತ್ತಿದೆ.

ಬೆಂಗಳೂರು ಮೂಲದ ಅರವಿಂದ್ ಕಾರ್ತಿಕ್ ಎಂಬುವವರು ಈ ಅಪರೂಪದ ಕಪ್ಪುಚಿರತೆಯ ಚಿತ್ರಗಳನ್ನು ಸೆರೆಹಿಡಿದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಚಿರತ ತನ್ನ ಕುಟುಂಬದೊಂದಿಗೆ ಸಿಗುತ್ತಿರುವುದು ಅಪರೂಪವಾಗಿದೆ. ತಾಯಿ ಚಿರತೆ ಮತ್ತು ಎರಡು ಮರಿಗಳು ಒಟ್ಟಾಗಿ ಕಾಣಿಸುತ್ತಿದ್ದು, ಈ ಎರಡು ಮರಿಗಳ ಪೈಕಿ ಒಂದು ಕಪ್ಪು ಚಿರತೆಯಾಗಿದೆ. ಚಿರತೆ ಮತ್ತು ಕಪ್ಪು ಚಿರತೆಯನ್ನು ಒಟ್ಟಾಗಿ ನೋಡುವುದೇ ಒಂದು ಅದೃಷ್ಟ ಎಂದು ಆಂದೋಲನದೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಸದ್ಯ ಈಗ ಕಪ್ಪು ಚಿರತೆ ಮತ್ತು ಅದರ ಸಹೋದರ ಚಿರತೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು, ಅವುಗಳ ಚೆನ್ನಾಟವನ್ನ ಪ್ರವಾಸಿಗರು ಸೆರೆ ಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

30 mins ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

42 mins ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

51 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

2 hours ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

2 hours ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

2 hours ago