ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ ಈಗ ಚಿಕ್ಕಮಗಳೂರಿನ ಭದ್ರಾದ ಅರಣ್ಯದ ಲಕ್ಕವಳ್ಳಿ ಸಫಾರಿ ವೇಳೆ ಕಪ್ಪು ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ, ವನ್ಯಜೀವಿ ಪ್ರಿಯರನ್ನು ಸೆಳೆಯುತ್ತಿದೆ.
ಹೌದು, ಚಿಕ್ಕಮಗಳೂರಿನ ಭದ್ರಾದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈಗ ಕರಿಚಿರತೆಯೇ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಭದ್ರಾದಲಕ್ಕವಳ್ಳಿ ಬೋಟ್ ಸಫಾರಿ ಹಾಗೂ ಜೀಪ್ ಸಫಾರಿಯ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಈ ಕಪ್ಪು ಚಿರತೆ ನೋಡಲು ಇದೀಗಾ ದೇಶ ವಿದೇಶಗಳಿಂದ ಪ್ರವಾಸಿಗರ ದಂಡೇ ಭದ್ರಗೆ ಹರಿದು ಬರುತ್ತಿದೆ.
ಬೆಂಗಳೂರು ಮೂಲದ ಅರವಿಂದ್ ಕಾರ್ತಿಕ್ ಎಂಬುವವರು ಈ ಅಪರೂಪದ ಕಪ್ಪುಚಿರತೆಯ ಚಿತ್ರಗಳನ್ನು ಸೆರೆಹಿಡಿದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಕಪ್ಪು ಚಿರತ ತನ್ನ ಕುಟುಂಬದೊಂದಿಗೆ ಸಿಗುತ್ತಿರುವುದು ಅಪರೂಪವಾಗಿದೆ. ತಾಯಿ ಚಿರತೆ ಮತ್ತು ಎರಡು ಮರಿಗಳು ಒಟ್ಟಾಗಿ ಕಾಣಿಸುತ್ತಿದ್ದು, ಈ ಎರಡು ಮರಿಗಳ ಪೈಕಿ ಒಂದು ಕಪ್ಪು ಚಿರತೆಯಾಗಿದೆ. ಚಿರತೆ ಮತ್ತು ಕಪ್ಪು ಚಿರತೆಯನ್ನು ಒಟ್ಟಾಗಿ ನೋಡುವುದೇ ಒಂದು ಅದೃಷ್ಟ ಎಂದು ಆಂದೋಲನದೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಸದ್ಯ ಈಗ ಕಪ್ಪು ಚಿರತೆ ಮತ್ತು ಅದರ ಸಹೋದರ ಚಿರತೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು, ಅವುಗಳ ಚೆನ್ನಾಟವನ್ನ ಪ್ರವಾಸಿಗರು ಸೆರೆ ಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…