ರಾಜ್ಯ

ಪ್ರವಾಸಿಗರ ಆಕರ್ಷಣೆಯ ಭದ್ರಾದ ಕಪ್ಪು ಚಿರತೆ

ಚಿಕ್ಕಮಗಳೂರು: ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದು, ವಿಶ್ವದಾದ್ಯಂತ ಇರುವ ವನ್ಯಜೀವಿಪ್ರಿಯರನ್ನು ತನ್ನತ್ತ ಸೆಳೆಯುವಲ್ಲಿ ನಾಗರಹೊಳೆಯ ಕಬಿನಿಯ ಭಗೀರ ಯಶಸ್ವಿಯಾಗಿದ್ದ ನಂತರ ಈಗ ಚಿಕ್ಕಮಗಳೂರಿನ ಭದ್ರಾದ ಅರಣ್ಯದ ಲಕ್ಕವಳ್ಳಿ ಸಫಾರಿ ವೇಳೆ ಕಪ್ಪು ಚಿರತೆ ಹೆಚ್ಚಾಗಿ ಕಾಣಿಸಿಕೊಳ್ಳುವ ಮೂಲಕ, ವನ್ಯಜೀವಿ ಪ್ರಿಯರನ್ನು ಸೆಳೆಯುತ್ತಿದೆ.

ಹೌದು, ಚಿಕ್ಕಮಗಳೂರಿನ ಭದ್ರಾದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈಗ ಕರಿಚಿರತೆಯೇ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಭದ್ರಾದಲಕ್ಕವಳ್ಳಿ ಬೋಟ್ ಸಫಾರಿ ಹಾಗೂ ಜೀಪ್ ಸಫಾರಿಯ ವೇಳೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಈ ಕಪ್ಪು ಚಿರತೆ ನೋಡಲು ಇದೀಗಾ ದೇಶ ವಿದೇಶಗಳಿಂದ ಪ್ರವಾಸಿಗರ ದಂಡೇ ಭದ್ರಗೆ ಹರಿದು ಬರುತ್ತಿದೆ.

ಬೆಂಗಳೂರು ಮೂಲದ ಅರವಿಂದ್ ಕಾರ್ತಿಕ್ ಎಂಬುವವರು ಈ ಅಪರೂಪದ ಕಪ್ಪುಚಿರತೆಯ ಚಿತ್ರಗಳನ್ನು ಸೆರೆಹಿಡಿದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಚಿರತ ತನ್ನ ಕುಟುಂಬದೊಂದಿಗೆ ಸಿಗುತ್ತಿರುವುದು ಅಪರೂಪವಾಗಿದೆ. ತಾಯಿ ಚಿರತೆ ಮತ್ತು ಎರಡು ಮರಿಗಳು ಒಟ್ಟಾಗಿ ಕಾಣಿಸುತ್ತಿದ್ದು, ಈ ಎರಡು ಮರಿಗಳ ಪೈಕಿ ಒಂದು ಕಪ್ಪು ಚಿರತೆಯಾಗಿದೆ. ಚಿರತೆ ಮತ್ತು ಕಪ್ಪು ಚಿರತೆಯನ್ನು ಒಟ್ಟಾಗಿ ನೋಡುವುದೇ ಒಂದು ಅದೃಷ್ಟ ಎಂದು ಆಂದೋಲನದೊಂದಿಗೆ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಸದ್ಯ ಈಗ ಕಪ್ಪು ಚಿರತೆ ಮತ್ತು ಅದರ ಸಹೋದರ ಚಿರತೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದು, ಅವುಗಳ ಚೆನ್ನಾಟವನ್ನ ಪ್ರವಾಸಿಗರು ಸೆರೆ ಹಿಡಿದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

14 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago