ಬೆಂಗಳೂರು: ಜಾತಿ ಗಣತಿ ವರದಿಯೇ ಸಿದ್ದರಾಮಯ್ಯರಿಗೆ ಮರಣ ಶಾಸನ ಆಗಬಹುದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಜಾತಿ ಗಣತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡುತ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗುತ್ತಾರೆ ಎಂದು ಲೇವಡಿ ಮಾಡಿದರು.
ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದರೆ ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ ಈ ಮಟ್ಟಕ್ಕೂ ಅವರು ಬಂದಿದ್ದಾರಾ ಎನ್ನುವ ನೋವಾಗುತ್ತೆ ಎಂದು ಅಪಹಾಸ್ಯ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪ್ರಸ್ತುತ ತಂದಿರುವ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ತಿರಸ್ಕಾರ ಮಾಡಬೇಕು. ಮತ್ತೊಂದು ಸಮೀಕ್ಷೆ ಮಾಡಿ, ಇನ್ನೂ ಮೂರು ವರ್ಷ ಸಮಯ ಇದೆ. ಆದ್ದರಿಂದ ವರದಿ ತಿರಸ್ಕಾರ ಮಾಡಿ ಎಂದು ಮನವಿ ಮಾಡಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…