ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ.

ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ.

ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು 22 ಜೂನ್ 2025ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮಾಜಿ ಪ್ರಧಾನಿಗಳ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿದ್ದಾರೆ.

ಕರ್ನಾಟಕದ ಮಾವು ಬೆಳೆಗಾರರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ಕಡಿಮೆ ಇಳುವರಿ, ಹವಾಮಾನ ವೈಪರಿತ್ಯ ಮತ್ತು ಮಾವಿನಹಣ್ಣಿನ ಅಂತರರಾಜ್ಯ ಸಾಗಣೆಯ ಮೇಲಿನ ನಿರ್ಬಂಧಗಳಿಂದ ಉಂಟಾದ ತೀವ್ರ ಬೆಲೆ ಕುಸಿತದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದರು.

ಈ ಸಮಸ್ಯೆಗಳಿಂದ ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮಾವು ಬೆಳೆಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಮುಂದಿನ ದಿನಗಳಲ್ಲಿಯೂ ಇಂತಹದ್ದೇ ಸಮಸ್ಯೆ ಬರುವ ಸಾಧ್ಯತೆ ಇರುವುದರಿಂದ ತಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ಎಚ್‌ಡಿಡಿ ಸಚಿವರನ್ನು ಕೋರಿದ್ದರು.

NAFED ಮತ್ತು NCCF ಮೂಲಕ ಮಾವಿನ ಖರೀದಿಗಾಗಿ ಬೆಲೆ ಕೊರತೆ ಪಾವತಿ (PDP) ಮತ್ತು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS)ಯನ್ನು ಪ್ರಾರಂಭಿಸುವಂತೆಯೂ ದೇವೇಗೌಡರು ಕೇಂದ್ರವನ್ನು ವಿನಂತಿಸಿದ್ದರು. ಈ ಉಪಕ್ರಮ ಕೈಗೊಳ್ಳುವ ಮೂಲಕ ಬೆಳೆಗಾರರಿಗೆ ಲಾಭದಾಯಕ ಬೆಲೆಗಳು ಮತ್ತು ಆರ್ಥಿಕ ಸಂಕಷ್ಟದಿಂದ ಪರಿಹಾರವನ್ನು ನೀಡುತ್ತದೆ ಎಂದು ಮನವರಿಕೆ ಮಾಡಿದ್ದರು.

ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದು, ಭಾರತ ಸರ್ಕಾರವು ಕರ್ನಾಟಕದಲ್ಲಿ 2025–26ನೆ ಮಾರುಕಟ್ಟೆ ಋತುವಿನಲ್ಲಿ ಬೆಲೆ ಕೊರತೆ ಪಾವತಿ (PDP) ಯೋಜನೆಯಡಿಯಲ್ಲಿ ಕ್ವಿಂಟಲ್‌ಗೆ ₹1,616 ಮಾರುಕಟ್ಟೆ ಹಸ್ತಕ್ಷೇಪ ಬೆಲೆಯಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.

ಸಕಾಲಿಕ ಮಾರುಕಟ್ಟೆ ಮಧ್ಯಸ್ಥಿಕೆ ಮೂಲಕ ರೈತರನ್ನು ಬೆಂಬಲಿಸುವ ಕೇಂದ್ರದ ಬದ್ಧತೆಯನ್ನು ಸಚಿವರು ಪುನರುಚ್ಚರಿಸಿದ್ದು, ಬೆಳೆಗಾರರ ಉತ್ಪನ್ನಗಳಿಗೆ ನ್ಯಾಯಯುತ ಆದಾಯವನ್ನು ಖಚಿತಪಡಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಂತಸ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಚಾ.ನಗರ ವಿ.ವಿ | ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪಿಎಚ್‌.ಡಿಗೆ ಅವಕಾಶ

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ…

9 mins ago

ಪಿಯುಸಿ : ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳದ ನಿರೀಕ್ಷೆ

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…

2 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ಕರ್ನಾಟಕದ ಮೇಲೆ ಬಿಜೆಪಿಯ ರಾಷ್ಟ್ರೀಯ ನಾಯಕರ ಕಣ್ಣು

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…

3 hours ago

ತಮಿಳುನಾಡು ಸಿಎಂ ವಿಜಯ್ ಮುಂದೆ ಸವಾಲುಗಳ ಬೆಟ್ಟ

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…

3 hours ago

ಲ್ಯಾನ್ಸ್‌ಡೌನ್‌ ಕಟ್ಟಡಕ್ಕಿಲ್ಲ ಮುಕ್ತಿ : ಚರ್ಚೆಯಲ್ಲೇ ಕಾಲಹರಣ

ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.11 ಸೋಮವಾರ

3 hours ago