ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ.

ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ.

ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು 22 ಜೂನ್ 2025ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮಾಜಿ ಪ್ರಧಾನಿಗಳ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿದ್ದಾರೆ.

ಕರ್ನಾಟಕದ ಮಾವು ಬೆಳೆಗಾರರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ಕಡಿಮೆ ಇಳುವರಿ, ಹವಾಮಾನ ವೈಪರಿತ್ಯ ಮತ್ತು ಮಾವಿನಹಣ್ಣಿನ ಅಂತರರಾಜ್ಯ ಸಾಗಣೆಯ ಮೇಲಿನ ನಿರ್ಬಂಧಗಳಿಂದ ಉಂಟಾದ ತೀವ್ರ ಬೆಲೆ ಕುಸಿತದ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದರು.

ಈ ಸಮಸ್ಯೆಗಳಿಂದ ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮಾವು ಬೆಳೆಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಮುಂದಿನ ದಿನಗಳಲ್ಲಿಯೂ ಇಂತಹದ್ದೇ ಸಮಸ್ಯೆ ಬರುವ ಸಾಧ್ಯತೆ ಇರುವುದರಿಂದ ತಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ಎಚ್‌ಡಿಡಿ ಸಚಿವರನ್ನು ಕೋರಿದ್ದರು.

NAFED ಮತ್ತು NCCF ಮೂಲಕ ಮಾವಿನ ಖರೀದಿಗಾಗಿ ಬೆಲೆ ಕೊರತೆ ಪಾವತಿ (PDP) ಮತ್ತು ಮಾರುಕಟ್ಟೆ ಹಸ್ತಕ್ಷೇಪ ಯೋಜನೆ (MIS)ಯನ್ನು ಪ್ರಾರಂಭಿಸುವಂತೆಯೂ ದೇವೇಗೌಡರು ಕೇಂದ್ರವನ್ನು ವಿನಂತಿಸಿದ್ದರು. ಈ ಉಪಕ್ರಮ ಕೈಗೊಳ್ಳುವ ಮೂಲಕ ಬೆಳೆಗಾರರಿಗೆ ಲಾಭದಾಯಕ ಬೆಲೆಗಳು ಮತ್ತು ಆರ್ಥಿಕ ಸಂಕಷ್ಟದಿಂದ ಪರಿಹಾರವನ್ನು ನೀಡುತ್ತದೆ ಎಂದು ಮನವರಿಕೆ ಮಾಡಿದ್ದರು.

ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು, ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದು, ಭಾರತ ಸರ್ಕಾರವು ಕರ್ನಾಟಕದಲ್ಲಿ 2025–26ನೆ ಮಾರುಕಟ್ಟೆ ಋತುವಿನಲ್ಲಿ ಬೆಲೆ ಕೊರತೆ ಪಾವತಿ (PDP) ಯೋಜನೆಯಡಿಯಲ್ಲಿ ಕ್ವಿಂಟಲ್‌ಗೆ ₹1,616 ಮಾರುಕಟ್ಟೆ ಹಸ್ತಕ್ಷೇಪ ಬೆಲೆಯಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.

ಸಕಾಲಿಕ ಮಾರುಕಟ್ಟೆ ಮಧ್ಯಸ್ಥಿಕೆ ಮೂಲಕ ರೈತರನ್ನು ಬೆಂಬಲಿಸುವ ಕೇಂದ್ರದ ಬದ್ಧತೆಯನ್ನು ಸಚಿವರು ಪುನರುಚ್ಚರಿಸಿದ್ದು, ಬೆಳೆಗಾರರ ಉತ್ಪನ್ನಗಳಿಗೆ ನ್ಯಾಯಯುತ ಆದಾಯವನ್ನು ಖಚಿತಪಡಿಸುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸಂತಸ ವ್ಯಕ್ತಪಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago