ರಾಜ್ಯ

ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವಾಗ ದೂರು ದಾಖಲಿಸುತ್ತೀರಿ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯಭರಿತವಾಗಿ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸುಳ್ಳು ಸುದ್ದಿ ಹರಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಕುಹುಕವಾಡಿದ್ದಾರೆ.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಘಾತಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ ಎಂದಿರುವುದನ್ನು ಉಲ್ಲೇಖಿಸಿದ್ದಾರೆ.

ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಹೃದಯಘಾತಗಳಿಗೆ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ? ಬೇಕಾದರೆ ನಿಮ್ಮ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲಿ ಫ್ಯಾಕ್ಟ್ ಚೆಕ್ ಮಾಡಿಸಿ ಆಮೇಲೆ ದೂರು ಹಾಕಿ. ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

ಮಂಗಳೂರು: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆಯೂ ನವಮಂಗಳೂರು ಬಂದರಿಗೆ ಎಲ್‌ಪಿಜಿ ಹೊತ್ತ ಹಡಗು ಆಗಮಿಸಿದೆ. 16 ಸಾವಿರ ಮೆಟ್ರಿಕ್‌…

9 mins ago

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ಇನ್ನೂ ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ

ನವದೆಹಲಿ: ಜ್ವರ ಮತ್ತು ಸೋಂಕು ಹಿನ್ನೆಲೆಯಲ್ಲಿ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ…

17 mins ago

ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

ಬೆಂಗಳೂರು: ಮಾರ್ಚ್.‌30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.‌31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್‌ ಮಾಹಿತಿ ನೀಡಿದ್ದು,…

1 hour ago

1ನೇ ತರಗತಿ ಪ್ರವೇಶ: 6 ವರ್ಷ ಕಡ್ಡಾಯ ನಿಯಮದಲ್ಲಿ 60 ದಿನಗಳ ವಿನಾಯಿತಿ

ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…

1 hour ago

ಬಜೆಟ್‌ ಕುರಿತು ನಡೆದ ಚರ್ಚೆಯ ಮೇಲಿನ ಉತ್ತರ ಪ್ರಮುಖ ಅಂಶಗಳಿವು.!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…

2 hours ago

ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…

2 hours ago