ರಾಜ್ಯ

ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್: ವಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವಾಗ ದೂರು ದಾಖಲಿಸುತ್ತೀರಿ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯಭರಿತವಾಗಿ ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಸುಳ್ಳು ಸುದ್ದಿ ಹರಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಕುಹುಕವಾಡಿದ್ದಾರೆ.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಘಾತಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ ಎಂದಿರುವುದನ್ನು ಉಲ್ಲೇಖಿಸಿದ್ದಾರೆ.

ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಹೃದಯಘಾತಗಳಿಗೆ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ? ಬೇಕಾದರೆ ನಿಮ್ಮ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲಿ ಫ್ಯಾಕ್ಟ್ ಚೆಕ್ ಮಾಡಿಸಿ ಆಮೇಲೆ ದೂರು ಹಾಕಿ. ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

4 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

4 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

5 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

5 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

5 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

6 hours ago