The Chief Minister himself is the brand ambassador of fake news: Opposition Leader R. Ashoka
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವಾಗ ದೂರು ದಾಖಲಿಸುತ್ತೀರಿ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯಭರಿತವಾಗಿ ಪ್ರಶ್ನಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸುಳ್ಳು ಸುದ್ದಿ ಹರಡುವ ಸಿಎಂ ಸಿದ್ದರಾಮಯ್ಯ ಸರ್ಕಾರ ಸುಳ್ಳು ಸುದ್ದಿ ತಡೆಗೆ ಕಾನೂನು ರೂಪಿಸಲು ಹೊರಟಿರುವುದು ಈ ಶತಮಾನದ ಅತ್ಯಂತ ದೊಡ್ಡ ವಿಪರ್ಯಾಸ ಎಂದು ಕುಹುಕವಾಡಿದ್ದಾರೆ.
ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರೇ, ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಘಾತಗಳಿಗೆ ಕೋವಿಡ್ ಲಸಿಕೆ ಕಾರಣವಲ್ಲ ಎಂದು ತಜ್ಞರ ವರದಿ ಸ್ಪಷ್ಟಪಡಿಸಿದೆ ಎಂದಿರುವುದನ್ನು ಉಲ್ಲೇಖಿಸಿದ್ದಾರೆ.
ಕೋವಿಡ್ ಲಸಿಕೆಗೆ ತರಾತುರಿಯಲ್ಲಿ ಅನುಮೋದನೆ ನೀಡಿ ಲಸಿಕೆ ಕೊಟ್ಟಿದ್ದೇ ಹೃದಯಘಾತಗಳಿಗೆ ಕಾರಣ ಎಂದು ಸುಳ್ಳು ಸುದ್ದಿ ಹರಡಿದ ಸಿಎಂ ಸಿದ್ದರಾಮಯ್ಯನವರ ಮೇಲೆ ಸುಳ್ಳು ಸುದ್ದಿ ಕೇಸು ಹಾಕ್ತೀರಾ? ಬೇಕಾದರೆ ನಿಮ್ಮ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲಿ ಫ್ಯಾಕ್ಟ್ ಚೆಕ್ ಮಾಡಿಸಿ ಆಮೇಲೆ ದೂರು ಹಾಕಿ. ರಾಜ್ಯದ ಮುಖ್ಯಮಂತ್ರಿಗಳೇ ಸುಳ್ಳು ಸುದ್ದಿ ಹರಡುವ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕರ್ನಾಟಕದ ದುರಂತ ಎಂದು ತಿರುಗೇಟು ನೀಡಿದ್ದಾರೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…