ರಾಜ್ಯ

ಸುವರ್ಣಸೌಧಕ್ಕೆ ಬಂದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಸಿಎಂ

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು
ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ.

ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾದ ಕಾರಣದ ಬಗ್ಗೆ ಮಾಧ್ಯಮದವರಿಗೆ ಉತ್ತರಿಸಿ, ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ ಎಂದರು.

ಎಐಸಿಸಿ ಅಧಿವೇಶನಕ್ಕೆ ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮ
ಎಐಸಿಸಿ ಅಧಿವೇಶನದ ದಿನವೇ , ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಹಾತ್ಮಾಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ, ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು.

ಗೋಲ್ವಾಲ್ಕರ್, ಹೆಗಡೆ, ಸಾವರ್ಕರ್ ಅವರು ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆಯಿರಿಸದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ. ನಮ್ಮ ಮಹಾತ್ಮಾಗಾಂಧಿ ಆಧರಿಸಿದ ಎಐಸಿಸಿ ಅಧಿವೇಶನವನ್ನು ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮಕೈಗೊಳ್ಳಲಾಗುವುದು ಎಂದರು.

ರಾಜಕಾರಣಕ್ಕಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ
ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯವರು ಪದೇ ಪದೇ ಹೋರಾಟ ಮಾಡಿ ಅಡ್ಡಿಪಡಿಸುತ್ತಿರುವ ಬಗ್ಗೆ ಉತ್ತರಿಸಿ, ವಿರೋಧಪಕ್ಷವಾಗಿ ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ , ಸರ್ಕಾರದ ತಪ್ಪು ಒಪ್ಪುಗಳ ಬಗ್ಗೆ ಮಾತನಾಡಬೇಕು. ಆದರೆ ಅದನ್ನು ಹೊರತುಪಡಿಸಿ , ರಾಜಕೀಯ ಕಾರಣಗಳಿಗಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಸಿಬಿಐಗೆ ವಹಿಸಿ ಎಂದು ಹೇಳಲು ಬಿಜೆಪಿಗೆ ನೈತಿಕತೆ ಇಲ್ಲ
150 ಕೋಟಿ ಆಫರ್ ಹಾಗೂ ವಕ್ಫ್ ಪ್ರಕರಣಗಳನ್ನು ಸಿಬಿಐಗೆ ನೀಡಲಿ ಎಂದು ಬಿಜೆಪಿಯ ವಿಜಯೇಂದ್ರ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2008 ರಿಂದ 2013ರವರೆಗೆ ಹಾಗೂ 2018 ರಿಂದ 2023ರವರೆಗೆ ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

55 seconds ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

6 mins ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

11 mins ago

ತಮಿಳುನಾಡು | ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ ; 20 ಮಂದಿ ಸಾವು, ಹಲವರು ಗಂಭೀರ

ವಿರುಧುನಗರ್ : ತಮಿಳುನಾಡಿನ ವಿರುಧುನಗರ್ ಜಿಲ್ಲೆಯ ಕಟ್ಟನಾರ್ ಪಟ್ಟಿ ಹಳ್ಳಿಯ ಸಮೀಪ ವನಜ್ ಪಟಾಕಿ ತಯಾರಿಕಾ ಘಟಕದಲ್ಲಿ ಭಾನುವಾರ ಮಧ್ಯಾಹ್ನ…

18 mins ago

ಕಾವೇರಿ ನದಿಯಲ್ಲಿ ಈಜಲು ಹೋಗಿ 6 ಮಂದಿ ಸಾವು

ಕೆ.ಆರ್.ನಗರ : ತಾಲೂಕಿನ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ನಡೆದ ಹಜರತ್ ಖಾದರ್ ಲಿಂಗವಲ್ಲಿ ಉರುಸ್ ಕಾರ್ಯಕ್ರಮಕ್ಕೆ ಬಂದಿದ್ದವರು ಕಾವೇರಿ…

1 hour ago

ಉಡುತೊರೆ ಜಲಾಶಯ | ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಕಾಡಾನೆಗಳ ರಕ್ಷಣೆ

ಹನೂರು : ಉಡುತೊರೆ ಹಳ್ಳ ಜಲಾಶಯದಲ್ಲಿ ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿಕೊಂಡಿದ್ದ ಮೂರು ಆನೆಗಳನ್ನು ಸುಮಾರು 17 ಗಂಟೆಗಳ…

2 hours ago