ರಾಜ್ಯ

ಸುವರ್ಣಸೌಧಕ್ಕೆ ಬಂದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಸಿಎಂ

ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಮನೆಯಲ್ಲಿ ಕಲಹ ತಂದಿದೆ ಎಂಬ ಬಿಜೆಪಿ ಆರೋಪ ಸುಳ್ಳು
ಇಂದು ಗೃಹಲಕ್ಷ್ಮಿ ಯೋಜನೆಯ ಹಣದಿಂದ ನಾನಾ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25 ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ಮುಖ್ಯಮಂತ್ರಿಗಳು, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ.

ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿಯಾದ ಕಾರಣದ ಬಗ್ಗೆ ಮಾಧ್ಯಮದವರಿಗೆ ಉತ್ತರಿಸಿ, ಬೆಂಗಳೂರು ನಗರದ ರಸ್ತೆಗಳ ಅಭಿವೃದ್ಧಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ ಎಂದರು.

ಎಐಸಿಸಿ ಅಧಿವೇಶನಕ್ಕೆ ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮ
ಎಐಸಿಸಿ ಅಧಿವೇಶನದ ದಿನವೇ , ಬಿಜೆಪಿಯವರು ವಕ್ಫ್ ಹೋರಾಟ ಹಮ್ಮಿಕೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಹಾತ್ಮಾಗಾಂಧೀಜಿಯವರು ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸದೇ ಹೋಗಿದ್ದರೆ, ಎಲ್ಲರೂ ಸ್ವತಂತ್ರವಾಗಿರಲು ಸಾಧ್ಯವಾಗುತ್ತಿತ್ತೇ? ಸಂವಿಧಾನ ರಚನೆಯಾದ ನಂತರವೇ ಇಂತಹ ಹಕ್ಕುಗಳನ್ನು ಚಲಾಯಿಸಲು ಸಾಧ್ಯವಾಗಿರುವುದು.

ಗೋಲ್ವಾಲ್ಕರ್, ಹೆಗಡೆ, ಸಾವರ್ಕರ್ ಅವರು ಸೇರಿದಂತೆ ಬಿಜೆಪಿಯವರು ಸಂವಿಧಾನ ವಿರೋಧಿಗಳು. ಭಾರತೀಯತೆಯಲ್ಲಿ ನಂಬಿಕೆಯಿರಿಸದಿರುವ ಇವರು ಮನುಸ್ಮೃತಿಗೆ ಒತ್ತು ನೀಡುವವರಾಗಿದ್ದಾರೆ. ನಮ್ಮ ಮಹಾತ್ಮಾಗಾಂಧಿ ಆಧರಿಸಿದ ಎಐಸಿಸಿ ಅಧಿವೇಶನವನ್ನು ಅಡ್ಡಿಪಡಿಸಿದರೆ ಕಾನೂನಿನ ರೀತಿ ಕ್ರಮಕೈಗೊಳ್ಳಲಾಗುವುದು ಎಂದರು.

ರಾಜಕಾರಣಕ್ಕಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿರುವ ಬಿಜೆಪಿ
ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿಯವರು ಪದೇ ಪದೇ ಹೋರಾಟ ಮಾಡಿ ಅಡ್ಡಿಪಡಿಸುತ್ತಿರುವ ಬಗ್ಗೆ ಉತ್ತರಿಸಿ, ವಿರೋಧಪಕ್ಷವಾಗಿ ಬಿಜೆಪಿಯವರು ರಾಜ್ಯದ ಅಭಿವೃದ್ಧಿ ಬಗ್ಗೆ , ಸರ್ಕಾರದ ತಪ್ಪು ಒಪ್ಪುಗಳ ಬಗ್ಗೆ ಮಾತನಾಡಬೇಕು. ಆದರೆ ಅದನ್ನು ಹೊರತುಪಡಿಸಿ , ರಾಜಕೀಯ ಕಾರಣಗಳಿಗಾಗಿ ಅಧಿವೇಶನವನ್ನು ಬಳಸಿಕೊಳ್ಳುತ್ತಿದ್ದಾರೆ ಎಂದರು.

ಸಿಬಿಐಗೆ ವಹಿಸಿ ಎಂದು ಹೇಳಲು ಬಿಜೆಪಿಗೆ ನೈತಿಕತೆ ಇಲ್ಲ
150 ಕೋಟಿ ಆಫರ್ ಹಾಗೂ ವಕ್ಫ್ ಪ್ರಕರಣಗಳನ್ನು ಸಿಬಿಐಗೆ ನೀಡಲಿ ಎಂದು ಬಿಜೆಪಿಯ ವಿಜಯೇಂದ್ರ ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2008 ರಿಂದ 2013ರವರೆಗೆ ಹಾಗೂ 2018 ರಿಂದ 2023ರವರೆಗೆ ಬಿಜೆಪಿಯವರು ಯಾವುದಾದರೂ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆಯೇ? ಅವರಿಗೆ ಈ ರೀತಿ ಹೇಳಲು ಯಾವುದೇ ನೈತಿಕತೆ ಇಲ್ಲ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

21 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

21 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

21 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

21 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

21 hours ago