ರಾಜ್ಯ

ಮತ್ತೆ ನಂದಿನ ಹಾಲಿನ ದರ ಹೆಚ್ಚಳ ಗ್ಯಾರಂಟಿ ಎಂದ ಸಿಎಂ

ಮಾಗಡಿ(ರಾಮನಗರ): ಕಳೆದ ಜೂನ್‌ನಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ, ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಸಿದ್ದರಾಮಯ್ಯ ಅವರೇ ಸುಳಿವು ನೀಡಿದ್ದಾರೆ.

ಇಂದು ಮಾಗಡಿ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ನೂತನವಾಗಿ ನಿರ್ಮಾಣಗೊಂಡಿರುವ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಂದಿನ ಹಾಲಿನ ದರ ಹೆಚ್ಚಳ ಗ್ಯಾರಂಟಿ. ಈ ಹೆಚ್ಚಳದ ಮಾಡಿದ ಹಾಲಿನ ದರ ನೇರವಾಗಿ ರೈತರಿಗೆ ಹೋಗಬೇಕು ಎಂದಿದ್ದಾರೆ.

ಹಾಲಿನ ದರ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹೆಚ್ಚಳ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಗಡಿಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ

ಮಾಗಡಿ ತಾಲ್ಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಎಲ್ಲಾ ರೀತಿಯ ಸಹಕಾರ ಬೆಂಬಲವನ್ನು ಕೊಡಲಿದೆ ಎಂದು  ಭರವಸೆ ನೀಡಿದರು.

ಬೆಂಗಳೂರಿನ ಹೊರವಲಯದಲ್ಲಿರುವ ಮಾಗಡಿ ಬಹಳ ಪ್ರಮುಖ ಪಟ್ಟಣ. ಕೆಂಪೇಗೌಡರ ರಾಜಧಾನಿಯಾಗಿದ್ದ ನಗರ. ಮಾಗಡಿ ಅಭಿವೃದ್ಧಿಯಾಗಬೇಕು ಎನ್ನುವ ವಾದದಲ್ಲಿ ನನ್ನ ಸಹಮತವೂ ಇದೆ ಎಂದರು. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಚರಣೆಗೆ ತಂದು ಪ್ರಾಧಿಕಾರವನ್ನೂ ರಚನೆ ಮಾಡಲಾಯಿತು. ಇದರ ಉದ್ದೇಶ ಕೆಂಪೇಗೌಡರನ್ನು ಎಲ್ಲರೂ ಸ್ಮರಿಸಬೇಕು ಎನ್ನುವುದಾಗಿತ್ತು. ಒಕ್ಕಲಿಗರ ನಾಯಕರು ಎಂದು ಹೇಳಿಕೊಳ್ಳುವವರು ಇದನ್ನು ಮಾಡಲಿಲ್ಲ. ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದು, ಅವರ ಜಯಂತ್ಯೋತ್ಸವವನ್ನು ಆಚರಿಸುವುದು ಸರ್ಕಾರದ ಕರ್ತವ್ಯ ಎಂದು ಭಾವಿಸಿ 2016-17 ರಲ್ಲಿ ಆಚರಣೆಗೆ ತಂದಿದ್ದ ನಮ್ಮ ಸರ್ಕಾರ ಎಂದರು.

ಬಿಜೆಪಿ ಸುಳ್ಳು ಆರೋಪ ಮಾಡುತ್ತಿದೆ

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ ಮೇಲೆ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಆರೋಪಿಸುತ್ತಿದ್ದಾರೆ. ಹಾಗಾದರೆ ಅಭಿವೃದ್ಧಿ ಕೆಲಸಗಳಿಗೆ 120 ಕೋಟಿ ರೂ.ಗಳನ್ನು ಅನುದಾನವನ್ನು ಏಕೆ ಮೀಸಲಿಡಲಾಗಿದೆ ಎಂದು ಪ್ರಶ್ನಿಸಿದರು. ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ. ಹಾಲಿಗೆ ಬೆಲೆ ಏರಿಸಲಾಗಿದೆ ಎಂದು ಬಿಜೆಪಿ ಆರೋಪಿಸಿದರು, ರೈತರಿಗೆ ಹಣ ಸೇರಬೇಡವೇ? ರೈತರಿಗೆ ಇದನ್ನು ಪ್ರಶ್ನಿಸಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು. ಹಾಲಿಗೆ 5.೦೦ ರೂ.ಗಳ ಪ್ರೋತ್ಸಾಹಧನ ಘೋಷಿಸಿದ್ದು ನಮ್ಮ ಸರ್ಕಾರ. ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದು ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ. ಏನೂ ಮಾಡದೇ ರೈತರ ಮಕ್ಕಳು ,ಮಣ್ಣಿನ ಮಕ್ಕಳು ಎನ್ನುತ್ತಾರೆ. ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ ಎಂದರು.

ಮೋದಿಯವರ 10 ವರ್ಷದ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ

ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ರಾಜ್ಯದ ಸುಮಾರು 1.20 ಲಕ್ಷ ಕುಟುಂಬಗಳಿಗೆ ವಾರ್ಷಿಕವಾಗಿ 50 ರಿಂದ 60 ಸಾವಿರ ರೂ.ಗಳ ಆರ್ಥಿಕ ಸಹಾಯವನ್ನು ಗ್ಯಾರಂಟಿಗಳ ಮೂಲಕ ಒದಗಿಸಲಾಗುತ್ತಿದೆ. ದೇಶದ ಸ್ವಾತಂತ್ರ್ಯಕ್ಕೆ ದುಡಿದ ನೆಹರೂ  ಹಾಗೂ ಇಂದಿರಾಗಾಂಧಿ ಸೇರಿದಂತೆ ಹಲವು ನಾಯಕರು ದೇಶಕ್ಕಾಗಿ ದುಡಿದಿದ್ದಾರೆ.

ಭಾರತದ ಮೇಲಿನ ಸಾಲ 182 ಲಕ್ಷ ಕೋಟಿಯನ್ನು ಮೀರುತ್ತಿದೆ. ಹಿಂದೆ ಸಾಲದ ಮೊತ್ತ 53.11 ಲಕ್ಷ ಕೋಟಿ ಇದ್ದ ಸಾಲದ ಮೊತ್ತ ಈಗ ಕಳೆದ 10 ವರ್ಷದಲ್ಲಿ 182 ಲಕ್ಷ ಕೋಟಿ ರೂ.ಗೆ ತಲುಪಿದೆ. ಗರೀಬಿ ಹಠಾವೋ, ಆಹಾರ ಸ್ವಾವಲಂಬನೆಯಂತ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷ ದೇಶಕ್ಕೆ ಕೊಟ್ಟಿದೆ ಎಂದರು.

ಎಸ್ ಸಿ ಎಸ್ ಪಿ / ಟಿಎಸ್ ಪಿ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಅನುದಾನವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಸುಳ್ಳು ನುಡಿದರು. ಆದರೆ 89.62 ಕೋಟಿ ಮೊತ್ತದ ಅವ್ಯವಹಾರವಾಗಿದ್ದು, ಅದರಲ್ಲಿ 56 ಕೋಟಿ ವಸೂಲು ಮಾಡಲಾಗಿದೆ. ಆದರೂ ಅಭಿವೃದ್ಧಿ ನಿಗಮಕ್ಕೆ ಈ ಮುಂಚೆ ನಿಗದಿಪಡಿಸಿರುವಂತೆ ಅನುದಾನವನ್ನು ನೀಡಿ, ಸಮುದಾಯದ ಅಭಿವೃದ್ಧಿಗೆ ಬಳಸಲಾಗುವುದು. ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ರೀತಿಯ ಜನಪರ ಕಾನೂನು ಬಿಜೆಪಿ ಆಡಳಿತದಲ್ಲಿರುವ ಯಾವುದೇ ರಾಜ್ಯದಲ್ಲಿ ಜಾರಿಯಾಗಿಲ್ಲ. ಬಿಜೆಪಿಯವರಿಗೆ ಕಾಂಗ್ರೆಸ್ ಸರ್ಕಾರವನ್ನು ಮೂದಲಿಸಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರ ಜನಸಂಖ್ಯೆಗೆ ಅನುಗುಣವಾಗಿ ಅವರ ಅಭಿವೃದ್ಧೀಗೆ ಪ್ರತ್ಯೇಕ ಅನುದಾನ ನೀಡುವ ಕಾನೂನು ಕಾಂಗ್ರೆಸ್ ಸರ್ಕಾರ ಎಂದರು.

ಮೋದಿಯವರು ಬಂಡವಾಳಶಾಹಿಗಳ ಪರ

ಬಿಜೆಪಿಯವರ ಬಡವರ ಹಾಗೂ ರೈತರ ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಕೈಗಾರಿಕೋದ್ಯಮಿಗಳ 16 ಲಕ್ಷ ಕೋಟಿ ರೂ.ಗಳ ಸಾಲವನ್ನು ಮನ್ನಾ ಮಾಡಿದರು. ಮೋದಿಯವರು ಬಂಡವಾಳಶಾಹಿಗಳ ಪರವಾಗಿದ್ದಾರೆ. ರಾಜ್ಯದ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಹಳಷ್ಟು ಹಗರಣಗಳು ನಡೆದಿವೆ. ಸುಳ್ಳು ಹೇಳುವ ಬಿಜೆಪಿ ಪಕ್ಷವನ್ನು ನಂಬಬೇಡಿ ಎಂದು ಜನರಿಗೆ ತಿಳಿಸಿದರು. ಕಾಂಗ್ರೆಸ್ ಸರ್ಕಾರ ಸದಾ ಬಡಜನರ ಪರವಾಗಿದೆ. ಶಕ್ತಿ ಯೋಜನೆಯಡಿ 3.50 ಕೋಟಿ ಜನ ಉಚಿತವಾಗಿ ಪ್ರಯಾಣಿಸಿದ್ದು, ಇದುವರೆಗೆ 287 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆದಿದ್ದಾರೆ. ನಾನು ಬಡವರ ಏಳಿಗೆಗಾಗಿಯೇ ಅಧಿಕಾರದಲ್ಲಿರುವುದು ಎಂದು ತಿಳಿಸಿರುವುದು. ಸರ್ಕಾರ ಹಾಲು ಉತ್ಪಾದಕರ , ದಲಿತರ, ಅಲ್ಪಸಂಖ್ಯಾತರ, ಬಡವರ ಪರವಾಗಿರಲಿದೆ. ನನ್ನ ಜೀವನ ತೆರೆದ ಪುಸ್ತಕವಿದ್ದಂತೆ.ರಾಜ್ಯದ ಜನರ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

10 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

10 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

10 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

10 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

11 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

11 hours ago