ರಾಜ್ಯ

ಇಂದು ಹಾಸನಾಂಬೆಯ ದರ್ಶನ ಪಡೆಯಲಿರುವ ಸಿಎಂ

ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.

ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಸಿದ್ದರಾಮಯ್ಯ ಆಗಮಿಸಿ 12:30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹಾಸನಾಂಬೆ ದರ್ಶನದ ಬಳಿಕ ಎಸ್.ಎಂ.ಕೃಷ್ಣನಗರದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾಸನದ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಭದ್ರತೆ ಇದ್ದು, ಹಾಸನಾಂಬೆ ದೇಗುಲದ ಆವರಣದಲ್ಲೂ ಖಾಕಿ ಸರ್ಪಗಾವಲಿದೆ.

lokesh

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

15 hours ago