ರಾಜ್ಯ

ಇಂದು ಹಾಸನಾಂಬೆಯ ದರ್ಶನ ಪಡೆಯಲಿರುವ ಸಿಎಂ

ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.

ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಸಿದ್ದರಾಮಯ್ಯ ಆಗಮಿಸಿ 12:30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹಾಸನಾಂಬೆ ದರ್ಶನದ ಬಳಿಕ ಎಸ್.ಎಂ.ಕೃಷ್ಣನಗರದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾಸನದ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಭದ್ರತೆ ಇದ್ದು, ಹಾಸನಾಂಬೆ ದೇಗುಲದ ಆವರಣದಲ್ಲೂ ಖಾಕಿ ಸರ್ಪಗಾವಲಿದೆ.

lokesh

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 21 ಮಂಗಳವಾರ  

34 mins ago

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

10 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

11 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

11 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

12 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

12 hours ago