ರಾಜ್ಯ

ಇಂದು ಹಾಸನಾಂಬೆಯ ದರ್ಶನ ಪಡೆಯಲಿರುವ ಸಿಎಂ

ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.

ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಸಿದ್ದರಾಮಯ್ಯ ಆಗಮಿಸಿ 12:30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹಾಸನಾಂಬೆ ದರ್ಶನದ ಬಳಿಕ ಎಸ್.ಎಂ.ಕೃಷ್ಣನಗರದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾಸನದ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಭದ್ರತೆ ಇದ್ದು, ಹಾಸನಾಂಬೆ ದೇಗುಲದ ಆವರಣದಲ್ಲೂ ಖಾಕಿ ಸರ್ಪಗಾವಲಿದೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago