ಹಾಸನ : ಹಾಸನಾಂಬೆ ದರ್ಶನೋತ್ಸವ ಸಂಭ್ರಮ ಕಳೆಗಟ್ಟಿದೆ. ಸಾರ್ವಜನಿಕ ದರ್ಶನದ ಐದನೇ ದಿನವಾದ ಇಂದು ದೇವಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದು, ಹಾಸನಾಂಬೆ ದರ್ಶನ ಪಡೆಯಲಿದ್ದಾರೆ.
ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇವರಿಗೆ ಹಲವು ಸಚಿವರು ಹಾಗೂ ಶಾಸಕರು ಸಾಥ್ ನೀಡಲಿದ್ದಾರೆ. ನ.2ರಂದು ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆದಿದ್ದು, ನ.3ರಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಸಾರ್ವಜನಿಕ ದರ್ಶನದ ಐದನೇ ದಿನವಾಗಿದ್ದು, ಮಂಗಳವಾರ ಶಕ್ತಿ ದೇವತೆಯ ದರ್ಶನ ಪಡೆಯಲು ಸಿಎಂ ಆಗಮಿಸುತ್ತಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಬೂವನಹಳ್ಳಿ ಹೆಲಿಪ್ಯಾಡ್ಗೆ ಸಿದ್ದರಾಮಯ್ಯ ಆಗಮಿಸಿ 12:30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹಾಸನಾಂಬೆ ದರ್ಶನದ ಬಳಿಕ ಎಸ್.ಎಂ.ಕೃಷ್ಣನಗರದಲ್ಲಿ ಜಿಲ್ಲಾಡಳಿತ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾಸನದ ಜಿ.ಪಂ. ಸಭಾಂಗಣದಲ್ಲಿ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಸಿಎಂ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿಪೊಲೀಸ್ ಭದ್ರತೆ ಇದ್ದು, ಹಾಸನಾಂಬೆ ದೇಗುಲದ ಆವರಣದಲ್ಲೂ ಖಾಕಿ ಸರ್ಪಗಾವಲಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…