ಬೆಂಗಳೂರು: ಜ್ಞಾನ ಮತ್ತು ಜ್ಞಾಪಕಶಕ್ತಿಯ ಸಮ್ಮಿಲನವೇ ರಸಪ್ರಶ್ನೆ ಸ್ಪರ್ಧೆ. ಇದು ಬುದ್ಧಿ, ಭಾವಕ್ಕೆ ಕಸರತ್ತು ನೀಡುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನ ಜಿಕೆವಿಕೆಯ ಸಭಾಂಗಣದಲ್ಲಿಂದು ಬೆಂಗಳೂರು ದೂರದರ್ಶನ ಕೇಂದ್ರದಿಂದ ಪ್ರಸಾರವಾಗುವ ಥಟ್ ಅಂತ ಹೇಳಿ ಕ್ವಿಜ್ ಕಾರ್ಯಕ್ರಮ 5000 ಸಂಚಿಕೆಯೊಂದಿಗೆ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರುತ್ತಿರುವ ಸಂದರ್ಭಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಮಾಹಿತಿ ಮತ್ತು ಮನರಂಜನೆ ನೀಡುವ ಈ ಕಾರ್ಯಕ್ರಮ ಕಳೆದ 23 ವರ್ಷಗಳಿಂದ ವೀಕ್ಷಕರ ಜ್ಞಾನದಾಹ ತಣಿಸುತ್ತಿದೆ ಎಂದರು.
ಬೆಂಗಳೂರು ದೂರದರ್ಶನ ಆರಂಭವಾದ 1980ರ ದಶಕದಿಂದಲೂ ತನ್ನ ಗಾಂಭೀರ್ಯತೆ, ವೃತ್ತಿ ನಿಷ್ಠೆ ಉಳಿಸಿಕೊಂಡಿದೆ. ವಿಚಾರಪೂರ್ಣ ಮಾಹಿತಿ, ಆರೋಗ್ಯಕರ ಮನರಂಜನೆಯನ್ನು ಉಚಿತವಾಗಿ ಸಮಸ್ತ ಜನತೆಗೆ ನೀಡುತ್ತಿದೆ. ಹಲವು ಪ್ರತಿಭೆಗಳ ಪ್ರಕಾಶಕ್ಕೆ ಅನುವು ಮಾಡಿಕೊಟ್ಟಿದೆ ಎಂದರು.
ಇದನ್ನು ಓದಿ : ಓದುಗರ ಪತ್ರ: ಗಿನ್ನಿಸ್ ದಾಖಲೆಯತ್ತ ‘ಥಟ್ ಅಂತ ಹೇಳಿ’
ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದಾರೆ. 75 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ತಿಳಿದು ಅಚ್ಚರಿ ಎನಿಸಿತು. ಮಾಧ್ಯಮ ತಜ್ಞರಾದ ಡಾ. ನಾ. ಸೋಮೇಶ್ವರ್ ಅಭಿನಂದನಾರ್ಹರು ಎಂದರು.
ಥಟ್ ಅಂತ ಹೇಳಿ ಕಾರ್ಯಕ್ರಮವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿಯೂ ನಡೆಸಲಾಗಿತ್ತು. ಪ್ರಕೃತಿ, ಪರಿಸರ, ವನ್ಯಜೀವಿಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದಲೂ ಮಾಹಿತಿ ಆಹ್ವಾನಿಸಿ ಅದನ್ನು ತಿಳಿಯಪಡಿಸಲಾಗುತ್ತಿದೆ. ಒಟ್ಟಾರೆ ಥಟ್ ಅಂತ ಹೇಳಿ ಕಾರ್ಯಕ್ರಮ ಒಂದು ಜ್ಞಾನಭಂಡಾರ ಎಂದು ಈಶ್ವರ ಖಂಡ್ರೆ ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ನಾಡೋಜ ವೊಡೇ ಪಿ ಕೃಷ್ಣ, ಕಲಬುರ್ಗಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶಶಿಕಾಂತ್ ಉಡಿಕೇರಿ, ವಿದುಷಿ ರೇವತಿ ಕಾಮತ್ ಮೊದಲಾದವರು ಪಾಲ್ಗೊಂಡಿದ್ದರು.
ಮಹಾದೇಶ್ ಎಂ ಗೌಡ ಹನೂರು: ಮಳೆಯನ್ನೇ ಆಶ್ರಯಿಸಿ ಬೆಳೆಯಬೇಕಿದ್ದ ಸ್ಥಿತಿ, ಕುಸಿಯುತ್ತಿರುವ ಅಂತರ್ಜಲದಿಂದ ಪಡಿಪಟಾಲು ಪಡುತ್ತಿದ್ದ ರೈತರ ಕಷ್ಟ ಕೊನೆಗೂ…
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…