ಬೆಂಗಳೂರು: ಜ್ಞಾನ ಮತ್ತು ಜ್ಞಾಪಕಶಕ್ತಿಯ ಸಮ್ಮಿಲನವೇ ರಸಪ್ರಶ್ನೆ ಸ್ಪರ್ಧೆ. ಇದು ಬುದ್ಧಿ, ಭಾವಕ್ಕೆ ಕಸರತ್ತು ನೀಡುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರಿನ ಜಿಕೆವಿಕೆಯ ಸಭಾಂಗಣದಲ್ಲಿಂದು ಬೆಂಗಳೂರು ದೂರದರ್ಶನ ಕೇಂದ್ರದಿಂದ ಪ್ರಸಾರವಾಗುವ ಥಟ್ ಅಂತ ಹೇಳಿ ಕ್ವಿಜ್ ಕಾರ್ಯಕ್ರಮ 5000 ಸಂಚಿಕೆಯೊಂದಿಗೆ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರುತ್ತಿರುವ ಸಂದರ್ಭಕ್ಕೆ ಸಾಕ್ಷಿಯಾಗಿ ಮಾತನಾಡಿದ ಅವರು, ಮಾಹಿತಿ ಮತ್ತು ಮನರಂಜನೆ ನೀಡುವ ಈ ಕಾರ್ಯಕ್ರಮ ಕಳೆದ 23 ವರ್ಷಗಳಿಂದ ವೀಕ್ಷಕರ ಜ್ಞಾನದಾಹ ತಣಿಸುತ್ತಿದೆ ಎಂದರು.
ಬೆಂಗಳೂರು ದೂರದರ್ಶನ ಆರಂಭವಾದ 1980ರ ದಶಕದಿಂದಲೂ ತನ್ನ ಗಾಂಭೀರ್ಯತೆ, ವೃತ್ತಿ ನಿಷ್ಠೆ ಉಳಿಸಿಕೊಂಡಿದೆ. ವಿಚಾರಪೂರ್ಣ ಮಾಹಿತಿ, ಆರೋಗ್ಯಕರ ಮನರಂಜನೆಯನ್ನು ಉಚಿತವಾಗಿ ಸಮಸ್ತ ಜನತೆಗೆ ನೀಡುತ್ತಿದೆ. ಹಲವು ಪ್ರತಿಭೆಗಳ ಪ್ರಕಾಶಕ್ಕೆ ಅನುವು ಮಾಡಿಕೊಟ್ಟಿದೆ ಎಂದರು.
ಇದನ್ನು ಓದಿ : ಓದುಗರ ಪತ್ರ: ಗಿನ್ನಿಸ್ ದಾಖಲೆಯತ್ತ ‘ಥಟ್ ಅಂತ ಹೇಳಿ’
ಥಟ್ ಅಂತ ಹೇಳಿ ಕಾರ್ಯಕ್ರಮದಲ್ಲಿ 15 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದಾರೆ. 75 ಸಾವಿರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ತಿಳಿದು ಅಚ್ಚರಿ ಎನಿಸಿತು. ಮಾಧ್ಯಮ ತಜ್ಞರಾದ ಡಾ. ನಾ. ಸೋಮೇಶ್ವರ್ ಅಭಿನಂದನಾರ್ಹರು ಎಂದರು.
ಥಟ್ ಅಂತ ಹೇಳಿ ಕಾರ್ಯಕ್ರಮವನ್ನು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿಯೂ ನಡೆಸಲಾಗಿತ್ತು. ಪ್ರಕೃತಿ, ಪರಿಸರ, ವನ್ಯಜೀವಿಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸಿದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದಲೂ ಮಾಹಿತಿ ಆಹ್ವಾನಿಸಿ ಅದನ್ನು ತಿಳಿಯಪಡಿಸಲಾಗುತ್ತಿದೆ. ಒಟ್ಟಾರೆ ಥಟ್ ಅಂತ ಹೇಳಿ ಕಾರ್ಯಕ್ರಮ ಒಂದು ಜ್ಞಾನಭಂಡಾರ ಎಂದು ಈಶ್ವರ ಖಂಡ್ರೆ ಬಣ್ಣಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ನಾಡೋಜ ವೊಡೇ ಪಿ ಕೃಷ್ಣ, ಕಲಬುರ್ಗಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಶಶಿಕಾಂತ್ ಉಡಿಕೇರಿ, ವಿದುಷಿ ರೇವತಿ ಕಾಮತ್ ಮೊದಲಾದವರು ಪಾಲ್ಗೊಂಡಿದ್ದರು.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…