ಕಲಬುರಗಿ : ಬಿಜೆಪಿಯ ವಿರುದ್ಧ ಆಪರೇಷನ್ ಕಮಲ ಆರೋಪ ಮಾಡುವ ಕಾಂಗ್ರೆಸ್ನವರ ಸರ್ಕಾರ ಪತನವಾದರೆ ಅದು ಅವರ ಪಕ್ಷದವರಿಂದಲೆ ಆಗಿರುತ್ತದೆ. ಅವರಲ್ಲಿನ ಗೊಂದಲಗಳಿಂದಲೇ ರಾಜ್ಯ ಸರ್ಕಾರ ಬೀಳಲಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿನ ದ್ವಂದ್ವ ನಿಲುವುಗಳಿಂದ ಈ ಸರ್ಕಾರ ಬಿದ್ದುಹೋಗಲಿದೆ. ಅದಕ್ಕೆ ಬಿಜೆಪಿ ಕಾರಣವಾಗುವುದಿಲ್ಲ. ಯಾಕೆಂದರೆ ಈ ಕಾಂಗ್ರೆಸ್ ಸರ್ಕಾರ ಬ್ಯಾಲೆನ್ಸ್ ತಪ್ಪಿ, ಒಳಜಗಳ ಪ್ರಾರಂಭವಾಗಿದೆ. ಅವರಿಗೆ ರೈತರ ಏಳಿಗೆ ಮುಖ್ಯವಾಗಿಲ್ಲ, ರಾಜ್ಯದ ಜನರ ಕುರಿತು ಚಿಂತೆ ಇಲ್ಲ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಾಲ್ಕು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅವರಲ್ಲೇ ಇನ್ನೂ ಸ್ಪಷ್ಟತೆ ಇಲ್ಲ, ಒಮ್ಮೆ ಸಿದ್ದರಾಮಯ್ಯ ನಾನೇ ಐದು ವರ್ಷ ಮುಖ್ಯಮಂತ್ರಿ ಎನ್ನುತ್ತಾರೆ. ಮತ್ತೊಮ್ಮೆ ಮಾಧ್ಯಮಗಳ ಮೇಲೆ ಆರೋಪಿಸುತ್ತಾರೆ. ಇಷ್ಟೊಂದು ಸುಳ್ಳುಗಳನ್ನು ಯಾಕೆ ಅವರು ಹೇಳುತ್ತಿದ್ದಾರೆ ಎನ್ನುವುದು ನನಗೆ ಗೊತ್ತಾಗುತ್ತಿಲ್ಲ. ಇಂದು ಹೇಳಿದ್ದನ್ನು ನಾಳೆ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೇವಲ ಗ್ಯಾರಂಟಿಗಳ ಬಗ್ಗೆನೇ ಮಾತನಾಡುವ ಕಾಂಗ್ರೆಸ್ನವರಿಗೆ ರಾಜ್ಯದ ಜನರ ಹಿತ ಕಾಯುವುದು ಮುಖ್ಯವಾಗಿಲ್ಲ. ಪದೇ ಪದೇ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿ ಆರೋಪಿಸುವ ಬದಲು, ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವ ಕೆಲಸ ಮಾಡಲಿ ಎಂದು ಬಿ.ಸಿ.ಪಾಟೀಲ್ ಒತ್ತಾಯಿಸಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…