ರಾಜ್ಯ

ಕಾಂಗ್ರೆಸ್‌ ಸರ್ಕಾರ ತಮ್ಮಲ್ಲಿನ ದ್ವಂದ್ವ ನಿಲುವುಗಳಿಂದಲೇ ಬಿದ್ದುಹೋಗಲಿದೆ : ಬಿ.ಸಿ.ಪಾಟೀಲ್

ಕಲಬುರಗಿ : ಬಿಜೆಪಿಯ ವಿರುದ್ಧ ಆಪರೇಷನ್ ಕಮಲ ಆರೋಪ ಮಾಡುವ ಕಾಂಗ್ರೆಸ್‌ನವರ ಸರ್ಕಾರ ಪತನವಾದರೆ ಅದು ಅವರ ಪಕ್ಷದವರಿಂದಲೆ ಆಗಿರುತ್ತದೆ. ಅವರಲ್ಲಿನ ಗೊಂದಲಗಳಿಂದಲೇ ರಾಜ್ಯ ಸರ್ಕಾರ ಬೀಳಲಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿನ ದ್ವಂದ್ವ ನಿಲುವುಗಳಿಂದ ಈ ಸರ್ಕಾರ ಬಿದ್ದುಹೋಗಲಿದೆ. ಅದಕ್ಕೆ ಬಿಜೆಪಿ ಕಾರಣವಾಗುವುದಿಲ್ಲ. ಯಾಕೆಂದರೆ ಈ ಕಾಂಗ್ರೆಸ್ ಸರ್ಕಾರ ಬ್ಯಾಲೆನ್ಸ್ ತಪ್ಪಿ, ಒಳಜಗಳ ಪ್ರಾರಂಭವಾಗಿದೆ. ಅವರಿಗೆ ರೈತರ ಏಳಿಗೆ ಮುಖ್ಯವಾಗಿಲ್ಲ, ರಾಜ್ಯದ ಜನರ ಕುರಿತು ಚಿಂತೆ ಇಲ್ಲ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಾಲ್ಕು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅವರಲ್ಲೇ ಇನ್ನೂ ಸ್ಪಷ್ಟತೆ ಇಲ್ಲ, ಒಮ್ಮೆ ಸಿದ್ದರಾಮಯ್ಯ ನಾನೇ ಐದು ವರ್ಷ ಮುಖ್ಯಮಂತ್ರಿ ಎನ್ನುತ್ತಾರೆ. ಮತ್ತೊಮ್ಮೆ ಮಾಧ್ಯಮಗಳ ಮೇಲೆ ಆರೋಪಿಸುತ್ತಾರೆ. ಇಷ್ಟೊಂದು ಸುಳ್ಳುಗಳನ್ನು ಯಾಕೆ ಅವರು ಹೇಳುತ್ತಿದ್ದಾರೆ ಎನ್ನುವುದು ನನಗೆ ಗೊತ್ತಾಗುತ್ತಿಲ್ಲ. ಇಂದು ಹೇಳಿದ್ದನ್ನು ನಾಳೆ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕೇವಲ ಗ್ಯಾರಂಟಿಗಳ ಬಗ್ಗೆನೇ ಮಾತನಾಡುವ ಕಾಂಗ್ರೆಸ್‌ನವರಿಗೆ ರಾಜ್ಯದ ಜನರ ಹಿತ ಕಾಯುವುದು ಮುಖ್ಯವಾಗಿಲ್ಲ. ಪದೇ ಪದೇ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿ ಆರೋಪಿಸುವ ಬದಲು, ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವ ಕೆಲಸ ಮಾಡಲಿ ಎಂದು ಬಿ.ಸಿ.ಪಾಟೀಲ್ ಒತ್ತಾಯಿಸಿದ್ದಾರೆ.

lokesh

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago