ಕಲಬುರಗಿ : ಬಿಜೆಪಿಯ ವಿರುದ್ಧ ಆಪರೇಷನ್ ಕಮಲ ಆರೋಪ ಮಾಡುವ ಕಾಂಗ್ರೆಸ್ನವರ ಸರ್ಕಾರ ಪತನವಾದರೆ ಅದು ಅವರ ಪಕ್ಷದವರಿಂದಲೆ ಆಗಿರುತ್ತದೆ. ಅವರಲ್ಲಿನ ಗೊಂದಲಗಳಿಂದಲೇ ರಾಜ್ಯ ಸರ್ಕಾರ ಬೀಳಲಿದೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿನ ದ್ವಂದ್ವ ನಿಲುವುಗಳಿಂದ ಈ ಸರ್ಕಾರ ಬಿದ್ದುಹೋಗಲಿದೆ. ಅದಕ್ಕೆ ಬಿಜೆಪಿ ಕಾರಣವಾಗುವುದಿಲ್ಲ. ಯಾಕೆಂದರೆ ಈ ಕಾಂಗ್ರೆಸ್ ಸರ್ಕಾರ ಬ್ಯಾಲೆನ್ಸ್ ತಪ್ಪಿ, ಒಳಜಗಳ ಪ್ರಾರಂಭವಾಗಿದೆ. ಅವರಿಗೆ ರೈತರ ಏಳಿಗೆ ಮುಖ್ಯವಾಗಿಲ್ಲ, ರಾಜ್ಯದ ಜನರ ಕುರಿತು ಚಿಂತೆ ಇಲ್ಲ. ಸಿದ್ದರಾಮಯ್ಯ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ನಾಲ್ಕು ಸಾವಿರಕ್ಕೂ ಅಧಿಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಅವರಲ್ಲೇ ಇನ್ನೂ ಸ್ಪಷ್ಟತೆ ಇಲ್ಲ, ಒಮ್ಮೆ ಸಿದ್ದರಾಮಯ್ಯ ನಾನೇ ಐದು ವರ್ಷ ಮುಖ್ಯಮಂತ್ರಿ ಎನ್ನುತ್ತಾರೆ. ಮತ್ತೊಮ್ಮೆ ಮಾಧ್ಯಮಗಳ ಮೇಲೆ ಆರೋಪಿಸುತ್ತಾರೆ. ಇಷ್ಟೊಂದು ಸುಳ್ಳುಗಳನ್ನು ಯಾಕೆ ಅವರು ಹೇಳುತ್ತಿದ್ದಾರೆ ಎನ್ನುವುದು ನನಗೆ ಗೊತ್ತಾಗುತ್ತಿಲ್ಲ. ಇಂದು ಹೇಳಿದ್ದನ್ನು ನಾಳೆ ಇಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಕೇವಲ ಗ್ಯಾರಂಟಿಗಳ ಬಗ್ಗೆನೇ ಮಾತನಾಡುವ ಕಾಂಗ್ರೆಸ್ನವರಿಗೆ ರಾಜ್ಯದ ಜನರ ಹಿತ ಕಾಯುವುದು ಮುಖ್ಯವಾಗಿಲ್ಲ. ಪದೇ ಪದೇ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡಿ ಆರೋಪಿಸುವ ಬದಲು, ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸುವ ಕೆಲಸ ಮಾಡಲಿ ಎಂದು ಬಿ.ಸಿ.ಪಾಟೀಲ್ ಒತ್ತಾಯಿಸಿದ್ದಾರೆ.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…