ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದೆ. ನರೇಗಾ ಯೋಜನೆಯಲ್ಲಿ ಕೇಂದ್ರ ಸರ್ಕಾರ ಕೆಲ ಸುಧಾರಣೆಗಳನ್ನು ತಂದಿದ್ದು, ಅದನ್ನೇ ನೆಪ ಮಾಡಿಕೊಂಡು ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ. 140 ಶಾಸಕರ ಬೆಂಬಲವಿದೆ ಎಂಬ ದರ್ಪದಲ್ಲಿ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಅವರು ಕಿಡಿಕಾರಿದರು.
ಸದನದ ದುರ್ಬಳಕೆಗೆ ಸರ್ಕಾರ ಮುಂದಾಗಿದ್ದು ದುರ್ದೈವ. ಮನ್ರೇಗಾದಲ್ಲಿ ಕೆಲವು ಮಾರ್ಪಾಡುಗಳನ್ನು ತಂದಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾದಿಯಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಬಡವರಿಗಾಗಿ, ಕಾಂಗ್ರೆಸ್ ಪುಡಾರಿಗಳಿಗಲ್ಲ. ರಾಜ್ಯಪಾಲರ ಮೂಲಕ ಕೇಂದ್ರದ ವಿರುದ್ಧ ಜನರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. 140 ಶಾಸಕರ ಬೆಂಬಲ ಇದ್ದರೂ ದಬ್ಬಾಳಿಕೆ ಮಾಡುತ್ತಿದ್ದಾರೆ. ಸರ್ಕಾರ ನಡವಳಿಕೆ ಸರಿಪಡಿಸಿಕೊಳ್ಳದಿದ್ದರೆ, ಜನರು 40ಕ್ಕೆ ಇಳಿಸಲು ಕಾಯುತ್ತಿದ್ದಾರೆ ಎಂದು ಎಚ್ಚರಿಸಿದರು.
ಉದ್ಯೋಗ ಖಾತ್ರಿ ಯೋಜನೆ ಬಡವರಿಗೆ ಉಪಯೋಗ ಆಗಲಿ ಎಂದು ತಿದ್ದುಪಡಿ ಮಾಡಲಾಗಿದೆ. ಇದು ಬಡವರಿಗೆ ಇರುವ ಯೋಜನೆ ಹೊರೆತು, ಕಾಂಗ್ರೆಸ್ ಪುಡಾರಿಗಳಿಗಾಗಿ ಅಲ್ಲ. ರಾಜ್ಯಪಾಲರ ಮುಖೇನ ಕೇಂದ್ರದ ವಿರುದ್ಧ ಜನರನ್ನ ಎತ್ತಿಕಟ್ಟುವ ಕೆಲಸ ಮಾಡಲು ಸರ್ಕಾರ ಹೊರಟಿದೆ. ಮೊದಲು ಸಂವಿಧಾನದ ಗೌರವವನ್ನು ಸರ್ಕಾರ ಉಳಿಸಬೇಕೆಂದು ಆಗ್ರಹಿಸಿದರು.
ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ…
ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ…
ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು…
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್…
ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ…
ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ:…